alex Certify BIG NEWS: ಬಳ್ಳಾರಿ ಸಮಾವೇಶದಲ್ಲೂ ಬಜರಂಗ ಬಲಿ ಅಸ್ತ್ರ ಪ್ರಯೋಗಿಸಿದ ಪ್ರಧಾನಿ ಮೋದಿ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಳ್ಳಾರಿ ಸಮಾವೇಶದಲ್ಲೂ ಬಜರಂಗ ಬಲಿ ಅಸ್ತ್ರ ಪ್ರಯೋಗಿಸಿದ ಪ್ರಧಾನಿ ಮೋದಿ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಬಳ್ಳಾರಿ: ವಿಧಾನಸಭಾ ಚುನಾವಣೆಗೆ ಕೇವಲ 5 ದಿನಗಳು ಮಾತ್ರ ಬಾಕಿಯಿದ್ದು, ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ.

ಗಣಿ ನಾಡು ಬಳ್ಳಾರಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಬಜರಂಗ ಬಲಿ ಅಸ್ತ್ರ ಪ್ರಯೋಗಿಸುವ ಮೂಲಕ ಭಾಷಣ ಆರಂಭಿಸಿದ್ದಾರೆ. ಬಜರಂಗಬಲಿ ಕೀ ಜೈ, ಆಂಜನೇಯ ಸ್ವಾಮಿಕೀ ಜೈ. ಬಳ್ಳಾರಿಯ ಮೇಲೆ ಬಜರಂಗ ಬಲಿಯ ಆಶಿರ್ವಾದವಿದೆ. ಕನಕದುರ್ಗಮ್ಮ, ಕುಮಾರಸ್ವಾಮಿ ದೇವಾಲಯಗಳಿಗೂ ನನ್ನ ನಮಸ್ಕಾರ ಎಂದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಕಾಂಗ್ರೆಸ್ ಭ್ರಷ್ಟಾಚಾರ ಮಾಡಿ ದೇಶದ ಜನರನ್ನು ಮೋಸ ಮಾಡಿದೆ. ಸುಳ್ಳು ಸರ್ವೆ ಮಾಡಿಸಿ ಜನರನ್ನು ವಂಚಿಸಿದೆ. ಸ್ವಾತಂತ್ರ್ಯದ ಬಳಿಕ ದೇಶದ ವ್ಯವಸ್ಥೆಯನ್ನೇ ಕಾಂಗ್ರೆಸ್ ಭ್ರಷ್ಟವನ್ನಾಗಿ ಮಾಡಿತು. ಹಣ ಬಲದ ಜೊತೆಗೆ ರಾಜ್ಯದಲ್ಲಿ ಕಾಂಗ್ರೆಸ್ ಸುಳ್ಳು ಸರ್ವೆ ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆಂದು ಆರೋಪಿಸಿದರು.

ಕರ್ನಾಟಕವನ್ನು ದೇಶದಲ್ಲಿಯೇ ನಂಬರ್ 1 ರಾಜ್ಯವನ್ನಾಗಿ ಮಾಡುತ್ತೇವೆ. ಬಿಜೆಪಿಯಲ್ಲಿನ ಪ್ರಣಾಳಿಕೆಯಲ್ಲಿರುವ ಎಲ್ಲಾ ಅಂಶಗಳನ್ನು ಜಾರಿಗೆ ತರುತ್ತೇವೆ. ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳನ್ನು ನೀಡಿದೆ. ಅಲ್ಲದೇ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಮಾಡುವುದಾಗಿ ಹೇಳಿದೆ. ಕಾಂಗ್ರೆಸ್ ಗ್ಯಾರಂಟಿಗಳನ್ನು ನಂಬಿ ಮೋಸಹೋಗಬೇಡಿ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...