alex Certify BIG NEWS: ಬಾಂಬೆ ಟೀಮ್ ಗೆ ಸಂಪುಟದಲ್ಲಿ ಕೊಕ್ ವಿಚಾರ: ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಸಚಿವ ಮುನಿರತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಾಂಬೆ ಟೀಮ್ ಗೆ ಸಂಪುಟದಲ್ಲಿ ಕೊಕ್ ವಿಚಾರ: ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಸಚಿವ ಮುನಿರತ್ನ

ಮಂಡ್ಯ: ಈ ಬಾರಿ ಸಚಿವ ಸಂಪುಟ ವಿಸ್ತರಣೆ ವೇಳೆ ಬಾಂಬೆ ಟೀಂ ಗೆ ಕೋಕ್ ನೀಡುವ ಸಾಧ್ಯತೆ ಇದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಮುನಿರತ್ನ, ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ ಎಂದು ಹೇಳಿದ್ದಾರೆ.

ಮಂಡ್ಯದ ಮದ್ದೂರಿನಲ್ಲಿ ಮಾತನಾಡಿದ ಸಚಿವ ಮುನಿರತ್ನ, ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿ ಭೇಟಿ ವಿಚಾರ ಬಂದಾಗ ಸಂಪುಟ ವಿಸ್ತರಣೆ ವಿಚಾರ ಚರ್ಚೆಗೆ ಬರುತ್ತೆ. ಆದರೆ ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಹೈಕಮಾಂಡ್ ಹಾಗೂ ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ ಎಂದು ಹೇಳಿದರು.

ಸದ್ಯಕ್ಕೆ ಬಾಂಬೆ ಟೀಮ್ ಎನ್ನುವ ಪ್ರಶ್ನೆ ಇಲ್ಲ. ಬಾಂಬೆ ಟೀಂ, ವಲಸಿಗರು ಇದ್ಯಾವುದೂ ಅನ್ವಯಿಸಲ್ಲ. ನಾವೆಲ್ಲ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು. ಪಕ್ಷಕ್ಕೆ ನಿಷ್ಠಾವಂತರಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...