alex Certify BIG NEWS: ಬಾಣಂತಿ ಹಾಗೂ ಅವಳಿ ಮಕ್ಕಳ ಸಾವು ಪ್ರಕರಣ; ವೈದ್ಯರ ನಡೆಯಿಂದ ದಿಗ್ಭ್ರಮೆಗೊಂಡಿದ್ದೇನೆ ಎಂದ ಸಚಿವ ಸುಧಾಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಾಣಂತಿ ಹಾಗೂ ಅವಳಿ ಮಕ್ಕಳ ಸಾವು ಪ್ರಕರಣ; ವೈದ್ಯರ ನಡೆಯಿಂದ ದಿಗ್ಭ್ರಮೆಗೊಂಡಿದ್ದೇನೆ ಎಂದ ಸಚಿವ ಸುಧಾಕರ್

ತುಮಕೂರು: ತುಮಕೂರು ಜಿಲ್ಲಾಸ್ಪತ್ರೆಯ ವೈದ್ಯೆ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಬಾಣಂತಿ ಹಾಗೂ ಅವಳಿ ಮಕ್ಳಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಜನರನ್ನು ಅಮಾನತು ಮಾಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸಿಸಿ ಟಿವಿ ಕ್ಯಾಮರಾ ಪರಿಶೀಲನೆ ನಡೆಸಿದ್ದೇನೆ. ತುಂಬು ಗರ್ಭಿಣಿ ಆಸ್ಪತ್ರೆಗೆ ಬಂದಾಗ ಆಧಾರ್ ಕಾರ್ಡ್, ತಾಯಿ ಕಾರ್ಡ್ ಕೇಳಿದ್ದಾರೆ. ಆದರೆ ಅದ್ಯಾವುದೂ ಆಕೆ ಬಳಿ ಇರಲಿಲ್ಲ. ಮೊದಲ ಹೆರಿಗೆ ನಾರ್ಮಲ್ ಆಗಿದ್ದರಿಂದ ಮಹಿಳೆ ಈಬಾರಿಯೂ ಹಾಗೇ ಆಗಲಿದೆ ಎಂದುಕೊಂಡಿದ್ದಾಳೆ. ಕರ್ತವ್ಯದಲ್ಲಿದ್ದ ದಾದಿಯರು, ವೈದ್ಯರು ತಕ್ಷಣ ಮಹಿಳೆಗೆ ಚಿಕಿತ್ಸೆ ಕೊಡಿಸಬಹುದಿತ್ತು. ಆದರೆ ಹಾಗೆ ಮಾಡಿಲ್ಲ ಮೇಲ್ನೋಟಕ್ಕೆ ಇದು ಹೆರಿಗೆ ವಾರ್ಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನರ್ಸ್ ಗಳು, ಡಾಕ್ಟರ್ ಗಳ ನಿರ್ಲಕ್ಷ್ಯ ಎಂಬುದು ಗೊತ್ತಾಗುತ್ತಿದೆ ಎಂದರು.

ಮೂವರು ನರ್ಸಗಳು, ಓರ್ವ ಡಾಕ್ಟರ್ ಕರ್ತವ್ಯ ಲೋಪವೆಸಗಿದ್ದಾರೆ. ದಾದಿಯರು ಏನೇ ಹೇಳಿದರೂ ಮಹಿಳಾ ಡಾಕ್ಟರ್ ಬಂದು ಮಹಿಳೆಗೆ ಚಿಕಿತ್ಸೆ ನೀಡಬಹುದಿತ್ತು. ಆದರೆ ಹಾಗೆ ಮಾಡಿಲ್ಲ. ಇದು ಕೇವಲ ಕರ್ತವ್ಯ ಲೋಪ ಮಾತ್ರವಲ್ಲ, ವೈದ್ಯರು, ವೈದ್ಯಕೀಯ ಸಿಬ್ಬಂದಿ ಅಮಾನುಷವಾಗಿ ನಡೆದುಕೊಂಡಿದ್ದಾರೆ. ಈ ಘಟನೆಯಿಂದ ದಿಗ್ಭ್ರಮೆಗೊಳಗಾಗಿದ್ದೇನೆ. ಪ್ರಕರಣ ಸಂಬಂಧ ಮೂವರು ನರ್ಸ್ ಗಳು, ಓರ್ವ ವೈದ್ಯೆ ಸೇರಿ ನಾಲ್ವರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...