alex Certify BIG NEWS: ಬಾಯಿ ತಪ್ಪಿ ಹೇಳಿಕೆ ನೀಡಿದ್ದಾರೆ; HDK ಜೊತೆ ನಾನು ಮಾತನಾಡುತ್ತೇನೆ ಎಂದ BSY | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಾಯಿ ತಪ್ಪಿ ಹೇಳಿಕೆ ನೀಡಿದ್ದಾರೆ; HDK ಜೊತೆ ನಾನು ಮಾತನಾಡುತ್ತೇನೆ ಎಂದ BSY

ಶಿವಮೊಗ್ಗ: ಆರ್.ಎಸ್.ಎಸ್. ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕುಮಾರಸ್ವಾಮಿಯೊಂದಿಗೆ ನಾನು ವೈಯಕ್ತಿಕವಾಗಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಕುಮಾರಸ್ವಾಮಿ ಬಾಯಿ ತಪ್ಪಿ ಮಾತನಾಡಿದ್ದಾರೆ. ಅವರಿಗೆ ಏನೋ ತಪ್ಪು ಗ್ರಹಿಕೆ ಆಗಿರಬಹುದು. ಹಾಗಾಗಿ ಕುಮಾರಸ್ವಾಮಿ ಜೊತೆ ಖುದ್ದು ನಾನೇ ಮಾತುಕತೆ ನಡೆಸುತ್ತೇನೆ ಎಂದು ಹೇಳಿದರು.

ಸೌದಿ ವಿಮಾನ ನಿಲ್ದಾಣದಲ್ಲಿ ಸ್ಪೋಟಕಗಳಿದ್ದ ಡ್ರೋನ್ ದಾಳಿ: ವಿವಿಧ ದೇಶಗಳ 10 ಮಂದಿಗೆ ಗಾಯ, ನಿಲ್ದಾಣಕ್ಕೆ ಹಾನಿ

ದೇಶದಲ್ಲಿರುವ ನಾಲ್ಕು ಸಾವಿರ ಐಎಎಸ್, ಐಪಿಎಸ್ ಅಧಿಕಾರಿಗಳು ಆರ್.ಎಸ್.ಎಸ್. ಕಾರ್ಯಕರ್ತರು ಎಂದು ಹೇಳಿಕೆ ನೀಡಿದ್ದ ಕುಮಾರಸ್ವಾಮಿ, ಆರ್.ಎಸ್.ಎಸ್. ಬಗ್ಗೆ ನಾನು ನೀಡಿದ ಹೇಳಿಕೆಗಳಿಗೆ ಬಹಿರಂಗ ಚರ್ಚೆಗೆ ಸಿದ್ಧ. ಈ ಬಗ್ಗೆ ಚರ್ಚಿಸಲು ಬಿಜೆಪಿ ನಾಯಕರು ಬರಲಿ ಎಂದು ಸವಾಲು ಹಾಕಿದ್ದರು. ಇದರ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಯಡಿಯೂರಪ್ಪ ಹೆಚ್.ಡಿ.ಕೆ ಬಾಯಿತಪ್ಪಿ ಹೇಳಿದ್ದಾರೆ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...