ಬೆಂಗಳೂರು: ಬಿಎಂಟಿಸಿ ನೌಕರರಿಗೆ ಸಾರಿಗೆ ಸಚಿವ ಶ್ರೀರಾಮುಲು ಸಿಹಿ ಸುದ್ದಿ ನೀಡಿದ್ದು, 5 ಲಕ್ಷ ರೂಪಾಯಿ ಆರೋಗ್ಯ ವಿಮೆ ಘೋಷಿಸಿದ್ದಾರೆ.
ಆರೋಗ್ಯ ರಕ್ಷಾ ಯೋಜನೆಯಡಿ ಬಿಎಂಟಿಸಿಯ 35,000 ನೌಕರರಿಗೆ 5 ಲಕ್ಷ ರೂಪಾಯಿ ಆರೋಗ್ಯ ವಿಮೆ ಸೌಲಭ್ಯ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಈ ಯೋಜನೆಯಡಿ ನೌಕರರು ಖಾಸಗಿ ಆಸ್ಪತ್ರೆಯಲ್ಲಿಯೂ ಚಿಕಿತ್ಸೆ ಪಡೆಯಬಹುದು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯುಷ್ಮಾನ್ ಯೋಜನೆಯಡಿ 5 ಲಕ್ಷ ಆರೋಗ್ಯ ವಿಮೆ ಜಾರಿಗೆ ತರುತ್ತಿದ್ದು, ಆಯುಷ್ಮಾನ್ ಯೋಜನೆಯಡಿ ಸಾಸ್ತಾ ಎಂಬ ಯೋಜನೆ ತರಲು ಸಾರಿಗೆ ನಿಗಮ ಮುಂದಾಗಿದೆ.
ನಿಗಮದ ಸಿಬ್ಬಂದಿಗಳು ಹಾಗೂ ಕುಟುಂಬದವರು ಯಾವುದೇ ಅನಾರೋಗ್ಯಕ್ಕೆ ಒಳಗಾದಲ್ಲಿ ಈ ಯೋಜನೆಯಡಿ ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ. ದೀರ್ಘಕಾಲದ ಆರೋಗ್ಯ ಸಮಸ್ಯೆ, ಹೃದಯ ಬೈಪಾಸ್ ಸರ್ಜರಿ ಸೇರಿದಂತೆ ಹಲವು ಕಾಯಿಲೆಗೆ ಚಿಕಿತ್ಸೆ ಪಡೆಯಲು ಈ ಯೋಜನೆ ಅನುಕೂಲಕರವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.