alex Certify BIG NEWS: ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾದ ಮತ್ತೋರ್ವ ನಾಯಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾದ ಮತ್ತೋರ್ವ ನಾಯಕ

ಬೆಳಗಾವಿ: ವಿಧಾನಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿಯಲ್ಲಿ ಟಿಕೆಟ್ ಕೈತಪ್ಪುತ್ತಿದ್ದಂತೆ ಹಲವು ಹಿರಿಯ ನಾಯಕರು ಪಕ್ಷ ತೊರೆಯಲು ನಿರ್ಧರಿಸಿದ್ದು, ಚುನಾವಣೆ ಹೊತ್ತಲ್ಲೇ ಕೇಸರಿ ಪಾಳಯಕ್ಕೆ ಮತ್ತೊಂದು ಆಘಾತ ಎದುರಾಗಿದೆ.

ಅಥಣಿ ಕ್ಷೇತ್ರದ ಟಿಕೆಟ್ ಸಿಗದ ಕಾರಣಕ್ಕೆ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ರಾಜಿನಾಮೆ ಘೋಷಿಸಿರುವ ಬೆನ್ನಲ್ಲೇ ಇದೀಗ ಬೆಳಗಾವಿಯ ಇನ್ನೋರ್ವ ಬಿಜೆಪಿ ನಾಯಕ ರಾಜೀನಾಮೆಗೆ ಮುಂದಾಗಿದ್ದಾರೆ.

ಬೈಲಹೊಂಗಲ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಿಎಂ ಯಡಿಯೂರಪ್ಪ ಅವರ ಆಪ್ತ ಡಾ. ವಿಶ್ವನಾಥ್, ಬಿಜೆಪಿಗೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ. ಬೈಲಹೊಂಗಲದಲ್ಲಿ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವಿತ್ತು. ಆದರೆ ಜಗದೀಶ್ ಮೆಟಗುಡ್ಡಗೆ ಮಣೆ ಹಾಕಲಾಗಿದೆ. ಇದರಿಂದ ಬೆಂಬಲಿಗರೊಂದಿಗೆ ಬಿಜೆಪಿ ತೊರೆಯಲು ತೀರ್ಮಾನಿಸಿದ್ದರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...