alex Certify BIG NEWS: ಬಿಜೆಪಿಯವರದ್ದು ಮನೆಯೊಂದು ನೂರು ಬಾಗಿಲು ಆಗಿದೆ; ಸಚಿವ ಎಂ.ಬಿ. ಪಾಟೀಲ್ ಲೇವಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿಯವರದ್ದು ಮನೆಯೊಂದು ನೂರು ಬಾಗಿಲು ಆಗಿದೆ; ಸಚಿವ ಎಂ.ಬಿ. ಪಾಟೀಲ್ ಲೇವಡಿ

ಬೆಂಗಳೂರು: ಬಿಜೆಪಿ ಪಕ್ಷ ಛಿದ್ರ ಛಿದ್ರವಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ವಿಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬಿಜೆಪಿಯಲ್ಲಿನ ಆಂತರಿಕ ಕಲಹ ಬಹಿರಂಗವಾಗುತ್ತಿದೆ. ಬಿಜೆಪಿಯವರದ್ದು ಮನೆಯೊಂದು ನೂರು ಬಾಗಿಲು ಆಗಿದೆ. ಪಕ್ಷ ಛಿದ್ರವಾಗಿದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಅಂತಿಮ ಘಟ್ಟ ತಲುಪಿದೆ. ಎಷ್ಟೇ ಫೆವಿಕಾಲ್ ಹಾಕಿದರೂ ಬಿಜೆಪಿಯನ್ನು ಜೋಡಿಸಲು ಆಗಲ್ಲ, ಪಾಪ ನಮ್ಮ ಗ್ಯಾರಂಟಿಗಳಿಂದ ತೊಂದರೆ ಆಗುತ್ತಿದೆ ಅವರಿಗೆ ಎಂದು ಲೇವಡಿ ಮಾಡಿದ್ದಾರೆ.

ಬಿಜೆಪಿಯವರು ಒಬ್ಬೊಬ್ಬರು ಒಂದೊಂದು ತರ ಮಾತನಾಡುತ್ತಿದ್ದಾರೆ. ಉರಿದುಕೊಂಡಿದ್ದಾರೆ ಉರಿದುಕೊಳ್ಳಲಿ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...