alex Certify BIG NEWS: ಬಿಜೆಪಿಯವರನ್ನು ಸೀಳುನಾಯಿಗೆ ಹೋಲಿಸಿದ ಸಿದ್ದರಾಮಯ್ಯ; ಗೌಪ್ಯ ಸಭೆ ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿಯವರನ್ನು ಸೀಳುನಾಯಿಗೆ ಹೋಲಿಸಿದ ಸಿದ್ದರಾಮಯ್ಯ; ಗೌಪ್ಯ ಸಭೆ ವಿಡಿಯೋ ವೈರಲ್

ಮೈಸೂರು: ಪ್ರಧಾನಿ ಮೋದಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ 40 ವರ್ಷದ ನನ್ನ ರಾಜಕೀಯ ಜೀವನದಲ್ಲಿ ಇಂತಹ ಭ್ರಷ್ಟ ಸರ್ಕಾರವನ್ನು ನೋಡಿಲ್ಲ ಎಂದು ಗುಡುಗಿದ್ದಾರೆ.

ಮೈಸೂರಿನಲ್ಲಿ ಸಿದ್ದರಾಮಯ್ಯ ನಡೆಸಿದ ಕಾಂಗ್ರೆಸ್ ಗೌಪ್ಯ ಸಭೆ ವಿಡಿಯೋ ವೈರಲ್ ಆಗಿದ್ದು, ಈ ಸಭೆಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಾನು ಒಬ್ಬ ಮಾತನಾಡಿದರೆ ಅವರು 25 ಜನ ನಾಯಿಗಳಂತೆ ಬೀಳ್ತಾರೆ ಎಂದು ಕಿಡಿಕಾರಿದ ಸಿದ್ದರಾಮಯ್ಯ ಮಾತಿಗೆ ಕಾಂಗ್ರೆಸ್ ಸದಸ್ಯರು ಅವರೆಲ್ಲ ಮುಧೋಳ ನಾಯಿಗಳು ಎಂದು ಹೇಳಿದ್ದಾರೆ. ಇದಕ್ಕೆ ಸಮಜಾಯಿಷಿ ಕೊಟ್ಟ ಸಿದ್ದರಾಮಯ್ಯ ಅವರು ಸೀಳುನಾಯಿಗಳು ಎಂದು ಹೇಳಿದ್ದಾರೆ.

ಭ್ರಷ್ಟಾಚಾರ ಎಂದರೆ ಬಿಜೆಪಿ, ಬಿಜೆಪಿ ಎಂದರೆ ಭ್ರಷ್ಟಾಚಾರವಾಗಿದೆ. ಪ್ರಧಾನಿ ಮೋದಿ ತಾನೂ ತಿನ್ನಲ್ಲ, ತಿನ್ನಲು ಬಿಡಲ್ಲ ಎಂದು ಹೇಳಿದರು. ಆದರೆ ಏನು ಮಾಡುತ್ತಿದ್ದಾರೆ ? ಭ್ರಷ್ಟಾಚಾರ ರಾಜರೋಷವಾಗಿ ನಡೆಯುತ್ತಿದ್ದರೂ ಸುಮ್ಮನಿದ್ದಾರೆ. ಇದೇನಾ ಅಚ್ಚೇದಿನ್ ? ಯಾರಿಗೆ ಅಚ್ಚೇದಿನ್ ಬಂದಿದೆ ಹೇಳಿ ? ಗ್ಯಾಸ್ ದರ ಎಷ್ಟಿದೆ ? ದಿನಬಳಕೆ ವಸ್ತುಗಳ ದರ ಏನಾಗಿದೆ ಹೇಳಿ ? ಉದ್ಯೋಗ ಸೃಷ್ಟಿ ಮಾಡ್ತೀವಿ ಎಂದವರು ಮಾಡಿದರಾ ? ಏನೂ ಮಾಡಿಲ್ಲ. ಹೀಗಿರುವಾಗ ಬಿಜೆಪಿಗೆ ಯಾಕೆ ಮತ ಹಾಕಬೇಕು ? ಅವರ ಸಾಧನೆಯಾದರು ಏನು? ಎಂದು ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...