alex Certify BIG NEWS: ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಕೇಸ್; ಬಸ್ ಚಕ್ರಕ್ಕೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿದ ರೇಖಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಕೇಸ್; ಬಸ್ ಚಕ್ರಕ್ಕೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿದ ರೇಖಾ

ಬೆಂಗಳೂರು: ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಮಧ್ಯೆ ಪೊಲಿಸ್ ಠಾಣೆಗೆ ದೂರು ನೀಡಲೆಂದು ಬಂದಿದ್ದ ಅನಂತರಾಜು ಸ್ನೇಹಿತೆ ರೇಖಾ ಬಸ್ ಅಡಿಗೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬ್ಯಾಡರಹಳ್ಳಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರೇಖಾ ಇಂದು ಅನಂತರಾಜು ಪತ್ನಿ ಸುಮಾ ವಿರುದ್ಧ ಬೆದರಿಕೆ ಸಂಬಂಧ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದರು. ಠಾಣೆಯಿಂದ ಹೊರ ಹೋಗುತ್ತಿದ್ದಂತೆ ರಸ್ತೆಯಲ್ಲಿ ಬರುತ್ತಿದ್ದ ಬಿಎಂಟಿಸಿ ಬಸ್ ಗೆ ಅಡ್ಡಲಾಗಿ ಬಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಆಕೆಯ ಸ್ನೇಹಿತ ಆಕೆಯನ್ನು ರಕ್ಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರೇಖಾ, ನಾನು ಅನಂತರಾಜುಗೆ ಯಾವುದೇ ಬ್ಲಾಕ್ ಮೇಲ್ ಮಾಡಿಲ್ಲ. 6 ವರ್ಷಗಳಿಂದ ಲಿವಿನ್ ರಿಲೇಷನ್ ನಲ್ಲಿದ್ದೆವು. ಹೀಗಿರುವಾಗ ನಾನು ಹೇಗೆ ಬ್ಲಾಕ್ ಮೇಲ್ ಮಾಡಲು ಸಾಧ್ಯ? ಕೆಲವೊಂದು ತಪ್ಪುಗಳು ನಡೆದಿದೆ ನಿಜ. ಆದರೆ ನಾನು ಬ್ಲಾಕ್ ಮೇಲ್ ಮಾಡಿಲ್ಲ ಎಂದು ಹೇಳಿದ್ದಾರೆ.

ನನಗೆ ಬೆದರಿಕೆ ಕರೆಗಳು ಬರುತ್ತಿವೆ, ಈ ಬಗ್ಗೆ ದೂರು ನೀಡಲೆಂದು ಪೊಲೀಸ್ ಠಾಣೆಗೆ ಬಂದರೆ ನನ್ನನ್ನೇ ವಿಚಾರಣೆಗೆ ಅಂತ ಇರಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ನನಗೆ ನ್ಯಾಯ ಸಿಗುವ ಭರವಸೆಯೇ ಇಲ್ಲದಾಗಿದೆ. ಇನ್ನು ನನಗೆ ಸಾವೊಂದೆ ಇರುವ ದಾರಿ ಎಂದು ಮಾಧ್ಯಮಗಳ ಮುಂದೆ ಅಲವೊತ್ತುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...