alex Certify BIG NEWS: ಬಿಜೆಪಿ ಯುದ್ಧಕಾಂಡ ಜನ ಸಾಮಾನ್ಯರ ಕರ್ಮಕಾಂಡ; ನರಕಯಾತನೆಗೆ ಕೊನೆಯಿಲ್ಲದಾಗಿದೆ; ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಯುದ್ಧಕಾಂಡ ಜನ ಸಾಮಾನ್ಯರ ಕರ್ಮಕಾಂಡ; ನರಕಯಾತನೆಗೆ ಕೊನೆಯಿಲ್ಲದಾಗಿದೆ; ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಲೆಕ್ಕವನ್ನೂ ಸರ್ಕಾರಕ್ಕೆ ಸರಿಯಾಗಿ ಕೊಡಲಾಗುತ್ತಿಲ್ಲ. ಸುಳ್ಳು ಲೆಕ್ಕಗಳನ್ನು ಕೊಟ್ಟು ಸಾವಿನ ಸಂಖ್ಯೆಯನ್ನೂ ಮುಚ್ಚಿಡಲಾಗುತ್ತಿದೆ. ಜನರು ಬದುಕಿಗಾಗಿ ಹೋರಾಟ ನಡೆಸಿದ್ದರೆ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಗೆ ಬಿಸಿತುಪ್ಪವಾದ ಹೆಚ್. ವಿಶ್ವನಾಥ್ ವಿರುದ್ಧ ಶಿಸ್ತು ಕ್ರಮ…?

ರಾಜ್ಯದಲ್ಲಿ ಇಂದು ಜನರು ಉದ್ಯೋಗಕ್ಕಾಗಿ ಪರದಾಡುತ್ತಿದ್ದಾರೆ. ನರಕಯಾತನೆಗೆ ಕೊನೆಯಿಲ್ಲದಾಗಿದೆ. ಬಿಜೆಪಿ ಯುದ್ಧಕಾಂಡ ಜನರ ಕರ್ಮಕಾಂಡ ಎಂಬಂತಾಗಿದೆ ಪರಿಸ್ಥಿತಿ. ದುರಾಡಳಿತ, ಭ್ರಷ್ಟಾಚಾರ, ಅಧಿಕಾರಕ್ಕಾಗಿ ಕಿತ್ತಾಟದಲ್ಲೇ ಬಿಜೆಪಿ ನಾಯಕರು ಕಾಲಹರಣ ಮಾಡುತ್ತಿದ್ದಾರೆ. ಮೊದಲು ವಿಧಾನಮಂಡಲ ಅಧಿವೇಶನ ಕರೆಯಲಿ ರಾಜ್ಯದಲ್ಲಿ ಏನೇನು ನಡೆಯುತ್ತಿದೆ ಎಂಬುದರ ಬಗ್ಗೆ ಅಧಿವೇಶನದಲ್ಲಿ ವಿಸ್ತೃತ ಚರ್ಚೆ ನಡೆಸಬೇಕಿದೆ ಎಂದು ಹೇಳಿದರು.

ಪಲ್ಟಿ ಹೊಡೆದಿದ್ದ ಕಾರನ್ನ ಕ್ಷಣಾರ್ಧದಲ್ಲಿ ಎತ್ತಿ ನಿಲ್ಲಿಸಿದ ಜನ…!

ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಬಗ್ಗೆ ಸರ್ಕಾರ ಸರಿಯಾಗಿ ಮಾಹಿತಿ ನೀಡದೇ ಸುಳ್ಳು ಲೆಕ್ಕ ನೀಡುತ್ತಿದೆ. ಕೋವಿಡ್ ಸಾವಿನ ಲೆಕ್ಕವೇ ಸರಿಯಾಗಿ ಆಡಿಟ್ ಆಗುತ್ತಿಲ್ಲ. ಹಾಗಾಗಿ ಕಾಂಗ್ರೆಸ್ ಕಾರ್ಯಕರ್ತರೇ ಆಡಿಟ್ ಮಾಡಲಿದ್ದಾರೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯಕರ್ತರೇ ಆಡೀಟ್ ಮಾಡಿ, ಸಾವಿನ ಪ್ರಮಾಣಪತ್ರ ಸೇರಿ ಎಲ್ಲಾ ಮಾಹಿತಿ ಕಲೆ ಹಾಕಿ ಎಂದು ಕರೆ ನೀಡಿದರು. ಮೃತ ಕುಟುಂಬಗಳಿಗೆ ಕಾಂಗ್ರೆಸ್ ನಿಂದಲೇ ಪರಿಹಾರ ನೀಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...