alex Certify BIG NEWS: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ನೇತೃತ್ವದಲ್ಲಿ ಮಹತ್ವದ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಸರಿ ಪಾಳಯದಲ್ಲಿ ಚಟುವಟಿಕೆಗಳು ಚುರುಕುಗೊಂಡಿದ್ದು, ಇಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಯಲಿದೆ.

ರೆಸಿಡೆನ್ಶಿಯಲ್ ವೆಲ್ ಫೇರ್ ಅಸೋಶಿಯೇಷನ್ ಜೊತೆ ಬಿ.ಎಲ್. ಸಂತೋಷ್ ಸಭೆ ನಡೆಸಲಿದ್ದಾರೆ. ಬೆಂಗಳೂರು ನಗರದ ಮೂಲ ಸೌಕರ್ಯ, ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ನಗರದಲ್ಲಿ ಸಂಭವಿಸಿದ ಪ್ರವಾಹ, ಮಳೆಹಾನಿ ಬಗ್ಗೆಯೂ ಚರ್ಚೆ ನಡೆಯಲಿದೆ.

ಬೆಂಗಳೂರಿನ ಬಹುತೇಕ ಸಂಘಟನೆಗಳು ಈ ಸಭೆಯಲ್ಲಿ ಭಾಗಿಯಾಗಲಿವೆ. ಒಂದೆಡೆ ಚುನಾವಣಾ ಸಂದರ್ಭ, ಪಕ್ಷಾಂತರ ಪರ್ವ ಆರಂಭಾಗಿರುವ ಸಂದರ್ಭದಲ್ಲಿ ಬೆಂಗಳೂರು ಮಳೆಹಾನಿ ವಿಚಾರ ಮುಂದಿಟ್ಟು ನಡೆಯುತ್ತಿರುವ ಈ ಸಭೆ ಭಾರಿ ಮಹತ್ವ ಪಡೆದುಕೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...