alex Certify BIG NEWS: ಬಿಜೆಪಿ ವಿರುದ್ಧ ಮಾಜಿ ಸಚಿವ ಜನಾರ್ಧನ ರೆಡ್ದಿ ಮುನಿಸು; ಮನವೊಲಿಕೆ ಮಾಡುತ್ತೇನೆ ಎಂದ ಸಚಿವ ಶ್ರೀರಾಮುಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ವಿರುದ್ಧ ಮಾಜಿ ಸಚಿವ ಜನಾರ್ಧನ ರೆಡ್ದಿ ಮುನಿಸು; ಮನವೊಲಿಕೆ ಮಾಡುತ್ತೇನೆ ಎಂದ ಸಚಿವ ಶ್ರೀರಾಮುಲು

ಬೆಂಗಳೂರು: ಬಿಜೆಪಿಗೆ ಗಾಲಿ ಜನಾರ್ಧನ ರೆಡ್ಡಿ ಕೊಡುಗೆ ಅಪಾರ. ಜನಾರ್ಧನ ರೆಡ್ಡಿ ಯಾವತ್ತೂ ಬಿಜೆಪಿಯ ಪರವಾಗಿ ಇರುತ್ತಾರೆ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಬಿಜೆಪಿ ವಿರುದ್ಧ ಜನಾರ್ಧನ ರೆಡ್ಡಿ ಮುನಿಸು ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಸಚಿವ ಶ್ರೀರಾಮುಲು, ಜನಾರ್ಧನ ರೆಡ್ಡಿ ಏನು ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಬಿಜೆಪಿಗೆ ಜನಾರ್ಧನ ರೆಡ್ಡಿ ಕೊಡುಗೆ ಅಪಾರ. ಮಾಧ್ಯಮಗಳ ಮೂಲಕವೇ ನನಗೂ ಗೊತ್ತಾಗುತ್ತಿದೆ. ಯಾಕೆ ಹೀಗೆ ಮಾತನಾಡಿದ್ದಾರೆ ಎಂಬುದು ತಿಳಿಯುತ್ತಿಲ್ಲ. ಈ ಬಗ್ಗೆ ಅವರೊಂದಿಗೆ ಮಾತನಾಡಿ ಮನವೊಲಿಸುವ ಕೆಲಸ ಮಾಡುತ್ತೇನೆ ಎಂದರು.

ಬಿಜೆಪಿ ಪಕ್ಷ ಕಟ್ಟುವ ನಿಟ್ಟಿನಲ್ಲಿ ಜನಾರ್ಧನ ರೆಡ್ಡಿ ಅವರ ಕೊಡುಗೆ ಸಾಕಷ್ಟಿದೆ. ಅವರು ಸಕ್ರಿಯ ರಾಜಕಾರಣಕ್ಕೆ ಬರಬೇಕು ಎಂಬುದು ನನ್ನ ಇಚ್ಛೆ. ಲೋಪವಾಗಿದ್ದರೆ ಪಕ್ಷದ ಜೊತೆ ಚರ್ಚಿಸಿ ಸಮಾಧಾನಪಡಿಸಲಾಗುವುದು ಎಂದು ಹೇಳಿದರು.

ವಿಪಕ್ಷಗಳು ನನ್ನನ್ನು ಟೀಕಿಸಿದರೆ ಬೇಸರವಿಲ್ಲ. ಆದರೆ ಬಿಜೆಪಿಯಿಂದಲೇ ಇದನ್ನು ನಿರೀಕ್ಷಿಸಿರಲಿಲ್ಲ. ಪಕ್ಷ ಕಟ್ಟಲು, ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಪಾತ್ರವೂ ಇದೆ. ಶೀಘ್ರದಲ್ಲಿಯೇ ನನ್ನ ಮುಂದಿನ ನಡೆ ತಿಳಿಸುತ್ತೇನೆ ಎಂದು ಜನಾರ್ಧನ ರೆಡ್ದಿ ತಿಳಿಸಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se