alex Certify BIG NEWS: ಬಿಜೆಪಿ ಹಾಗೂ ಪ್ರತಾಪ್ ಸಿಂಹ ಅವರದ್ದು ಒಡೆದು ಆಳುವ ಸಂಸ್ಕೃತಿ; ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಹಾಗೂ ಪ್ರತಾಪ್ ಸಿಂಹ ಅವರದ್ದು ಒಡೆದು ಆಳುವ ಸಂಸ್ಕೃತಿ; ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ಹಾಗೂ ಸಂಸದ ಪ್ರತಾಪ್ ಸಿಂಹ ಅವರದ್ದು ಒಡೆದು ಆಳುವ ಸಂಸ್ಕೃತಿ ಎಂದು ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿರುವ ಡಿ.ಕೆ.ಸುರೇಶ್, ಪ್ರತಾಪ್ ಸಿಂಹ ಒಡೆದು ಆಳುವ ಸಂಸ್ಕೃತಿ ಇಟ್ಟುಕೊಂಡು ಮನೆಹಾಳು ಮಾಡುತ್ತಿದ್ದಾರೆ. ಬಿಜೆಪಿ ನಾಯಕರದ್ದು ಒಡೆದು ಆಳುವ ಸಂಸ್ಕೃತಿ ಎಂದು ಕಿಡಿಕಾರಿದ್ದಾರೆ.

ಪ್ರತಾಪ್ ಸಿಂಹ ಮುಸ್ಲಿಂ ರನ್ನು ವಿರೋಧಿಸುತ್ತಿದ್ದರು. ಈಗ ಯಾಕೆ ಮುಸ್ಲಿಂ ರ ಮೇಲೆ ಅವರಿಗೆ ಪ್ರೀತಿ? ಅವರ ತತ್ವ ಸಿದ್ಧಾಂತದಿಂದ ಅವರು ಆಚೆ ಬರುವುದು ಬೇಡ. ಕಾಂಗ್ರೆಸ್ ಪಕ್ಷ ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಪಕ್ಷ. ನಾವು ಏನು ಗ್ಯಾರಂಟಿ ಕೊಟ್ಟಿದ್ದೇವೆ ಅದನ್ನು ಅನುಷ್ಠಾನಕ್ಕೆ ತರುತ್ತೇವೆ ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...