alex Certify BIG NEWS: ಬಿಟ್ ಕಾಯಿನ್ ಬಡಿದಾಟ; ಕಾಂಗ್ರೆಸ್ ನಾಯಕರು ಖಾಲಿ ಡಬ್ಬ ಬಡಿಯುತ್ತಿದ್ದಾರೆ; ಕೈ ನಾಯಕರ ವಿರುದ್ಧ ಕಿಡಿ ಕಾರಿದ ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಟ್ ಕಾಯಿನ್ ಬಡಿದಾಟ; ಕಾಂಗ್ರೆಸ್ ನಾಯಕರು ಖಾಲಿ ಡಬ್ಬ ಬಡಿಯುತ್ತಿದ್ದಾರೆ; ಕೈ ನಾಯಕರ ವಿರುದ್ಧ ಕಿಡಿ ಕಾರಿದ ಈಶ್ವರಪ್ಪ

ಶಿವಮೊಗ್ಗ: ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿಯ ಯಾವುದೇ ನಾಯಕರೂ ಇಲ್ಲ. ಕಾಂಗ್ರೆಸ್ ನವರು ಅನಗತ್ಯವಾಗಿ ಸುಳ್ಳು ಆರೋಪಗಳನ್ನು ಮಾಡುತ್ತಾ, ನಮ್ಮ ಬಳಿ ದಾಖಲೆಗಳಿವೆ ಎಂದು ಹೇಳುತ್ತಿದ್ದಾರೆ. ಇದೊಂದು ರೀತಿ ಖಾಲಿ ಡಬ್ಬ ಬಡಿದಂತೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಕಾಂಗ್ರೆಸ್ ನಾಯಕರಿಗೆ ಮಾಡಲು ಉದ್ಯೋಗವಿಲ್ಲ. ಹಾಗಾಗಿ ಬಿಟ್ ಕಾಯಿನ್ ವಿಚಾರ ಕೈಗೆತ್ತಿಕೊಡು ಬಿಜೆಪಿ ನಾಯಕರ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಬಿಟ್ ಕಾಯಿನ್ ನಲ್ಲಿ ಬಿಜೆಪಿಯ ಯಾವುದಾದರೂ ನಾಯಕರು, ಸಚಿವರು ಭಾಗಿಯಾಗಿದ್ದರೆ ದಾಖಲೆ ತೋರಿಸಲಿ ಅಂತವರನ್ನು ಬಂಧಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.

BIG NEWS: ಬಳಕೆದಾರರಿಗೆ ಶೀಘ್ರದಲ್ಲೇ ಹೊಸ ವೈಶಿಷ್ಟ್ಯವನ್ನು ನೀಡಲಿದೆ ವಾಟ್ಸಾಪ್…​​..!

ಡಿಕೆಶಿ, ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆ ಬಾಯಿ ಚಪಲಕ್ಕೆ ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ. ಹಗರಣದಲ್ಲಿ ಕಾಂಗ್ರೆಸ್ ನಾಯಕರೇ ಭಾಗಿಯಾಗಿರುವುದರ ದಾಖಲೆಗಳಿವೆ. ಚುನಾವಣೆಯಲ್ಲಿ ಸೋತು, ಅಧಿಕಾರ ಕಳೆದುಕೊಂಡು ಈಗಾಗಲೇ ಜನರ ಮುಂದೆ ಮರ್ಯಾದೆ ಕಳೆದುಕೊಂಡಿದ್ದಾರೆ. ಈಗ ಬಿಟ್ ಕಾಯಿನ್ ವಿಚಾರವಾಗಿ ಸುಳ್ಳು ಹೇಳಿ ಇನ್ನಷ್ಟು ಮಾನ ಕಳೆದುಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...