alex Certify BIG NEWS: ಬಿಡಿಎ ಕಚೇರಿ ಮೇಲೆ ACB ಮುಂದುವರೆದ ಶೋಧ; ಎಸ್.ಆರ್ ವಿಶ್ವನಾಥ್ ಹೇಳಿದ್ದೇನು? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಡಿಎ ಕಚೇರಿ ಮೇಲೆ ACB ಮುಂದುವರೆದ ಶೋಧ; ಎಸ್.ಆರ್ ವಿಶ್ವನಾಥ್ ಹೇಳಿದ್ದೇನು?

ಬೆಂಗಳೂರು: ಬಿಡಿಎ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದು, ಇಂದು ಕೂಡ ದಾಖಲೆಗಳ ಪರಿಶೀಲನೆ ಮುಂದುವರೆಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಬಿಡಿಎ ಒಂದು ಕಾಲದಲ್ಲಿ ಜನಪರ ಸಂಸ್ಥೆಯಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ಭ್ರಷ್ಟಾಚಾರ, ಅವ್ಯವಹಾರಗಳೇ ತುಂಬಿ ತುಳುಕುತ್ತಿರುವುದಾಗಿ ಆರೋಪ ಕೇಳಿಬಂದಿದೆ ಎಂದಿದ್ದಾರೆ.

ಇಂದಿರಾಗಾಂಧಿಯವರ ಜನ್ಮ ದಿನೋತ್ಸವದಂದು ಅಪರೂಪದ ವಿಡಿಯೋ ಶೇರ್ ಮಾಡಿದ ಕಾಂಗ್ರೆಸ್‌ ಖಜಾಂಚಿ

ನಾನು ಅಧ್ಯಕ್ಷನಾಗಿ ಒಂದು ವರ್ಷವಾಗಿದೆ. ಸ್ವಚ್ಛ ಬಿಡಿಎ ಮಾಡುವುದು ನನ್ನ ಗುರಿ. ನಾನು ಬಂದಾಗ ಭ್ರಷ್ಟಾಚಾರ ನಡೆಸಿ ಸಿಕ್ಕಿ ಹಾಕಿಕೊಂಡವರ ವಿರುದ್ಧ ಕ್ರಮ ಕೈಗೊಂಡೆವು. ನಾನೂ ಸಹ ಎಸಿಬಿ ಅಧಿಕಾರಿಗಳಿಗೆ ಕೆಲವು ದಾಖಲೆಗಳನ್ನು ಕೊಡುವುದಾಗಿ ಹೇಳಿದ್ದೇನೆ ಎಂದರು.

ನಕಲಿ ದಾಖಲೆಕೊಟ್ಟು ನಿವೇಶನ ಪಡೆದವರಿದ್ದಾರೆ. ಏನೇ ಕ್ರಮ ಕೈಗೊಂಡರೂ ಬಳಿಕ ಕೋರ್ಟ್ ನಲ್ಲಿ ಸ್ಟೇ ತೆಗೆದುಕೊಳ್ಳುತ್ತಾರೆ. ಕೆಲ ಭ್ರಷ್ಟಾಚಾರವನ್ನು ನಾನೂ ಕೂಡ ತಡೆಯಲು ಸಾಧ್ಯವಾಗಲ್ಲ. ಈಗಲಾದರೂ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯಲಿ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...