alex Certify BIG NEWS: ಬಿಡುಗಡೆಯಾಗುತ್ತಿದ್ದಂತೆ ಗತ್ತಿನಿಂದ ಮೀಸೆ ತಿರುವಿದ ಮಾಜಿ ಸಚಿವ; ಕೋವಿಡ್ ನಿಯಮ ಗಾಳಿಗೆ ತೂರಿ ಬೆಂಬಲಿಗರಿಂದ ರೋಡ್ ಶೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಡುಗಡೆಯಾಗುತ್ತಿದ್ದಂತೆ ಗತ್ತಿನಿಂದ ಮೀಸೆ ತಿರುವಿದ ಮಾಜಿ ಸಚಿವ; ಕೋವಿಡ್ ನಿಯಮ ಗಾಳಿಗೆ ತೂರಿ ಬೆಂಬಲಿಗರಿಂದ ರೋಡ್ ಶೋ

ಬೆಳಗಾವಿ: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಕೇಸ್ ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಜೈಲಿನಿಂದ ಹೊರ ಬರುತ್ತಿದ್ದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಗತ್ತಿನಿಂದ ಮೀಸೆ ತಿರುವಿ ಪೋಸ್ ಕೊಟ್ಟಿದ್ದಾರೆ.

ಬೆಳಗಾವಿ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿ ಹೊರಬಂದ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಹಿಂಡಲಗಾ ಜೈಲಿನ ಬಳಿ ಮೂರು ಸಾವಿರಕ್ಕೂ ಹೆಚ್ಚು ಬೆಂಬಲಿಗರು ನೆರೆದಿದ್ದು, ಕೋವಿಡ್ ನಿಯಮ, ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ತಮ್ಮ ನಾಯಕನ ಭರ್ಜರಿ ಮೆರವಣಿಗೆ ಮಾಡಿದ್ದಾರೆ.

ಪಾಕ್ ಕ್ರಿಕೆಟ್​ ಅಭಿಮಾನಿಯ ಫೋಟೋ ಬಳಸಿ ಫೇಮಸ್​ ಆಯ್ತು ಈ ಇಂಗ್ಲಿಷ್​ ಪುಸ್ತಕ..!

ಸಾವಿರಾರು ಬೆಂಬಲಿಗರೊಂದಿಗೆ ವಿನಯ್ ಕುಲಕರ್ಣಿ ಹಿಂಡಲಗಾ ಜೈಲಿನಿಂದ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ್ದಾರೆ. ಮೆರವಣಿಗೆ ವೇಳೆ ಗತ್ತಿನಿಂದ ಮೀಸೆ ತಿರುವಿ ಪೋಸ್ ನೀಡಿದ್ದಾರೆ. ಮೆರವಣಿಗೆಯಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರು ಕಿಕ್ಕಿರಿದು ನೆರೆದಿದ್ದು, ದೈಹಿಕ ಅಂತರ, ಸಾಮಾಜಿಕ ಅಂತರ, ಮಾಸ್ಕ್ ಗಳಿಲ್ಲದೇ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಸಂಭ್ರಮಾಚರಣೆ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...