alex Certify BIG NEWS: ಬಿ.ಎಸ್. ಯಡಿಯೂರಪ್ಪ, ಡಿ.ಕೆ. ಶಿವಕುಮಾರ್ ವಿರುದ್ಧ ACBಗೆ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿ.ಎಸ್. ಯಡಿಯೂರಪ್ಪ, ಡಿ.ಕೆ. ಶಿವಕುಮಾರ್ ವಿರುದ್ಧ ACBಗೆ ದೂರು

ಬೆಂಗಳೂರು: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ 13 ರಾಜಕಾರಣಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಆಲಂ ಪಾಷಾ ಎಸಿಬಿಗೆ ದೂರು ನೀಡಿದ್ದಾರೆ.

ಡಿ.ಕೆ. ಶಿವಕುಮಾರ್ ಬಗ್ಗೆ ಕಾಂಗ್ರೆಸ್ ನಾಯಕರೇ ಆದ ವಿ.ಎಸ್. ಉಗ್ರಪ್ಪ, ಸಲೀಂ ನಡುವೆ ನಡೆದ ’ಕಲೆಕ್ಷನ್ ಗಿರಾಕಿ’ ಸಂಭಾಷಣೆ ಆಧಾರವಾಗಿಟ್ಟುಕೊಂಡು ಎಸಿಬಿಗೆ ದೂರು ನೀಡಲಾಗಿದೆ.

ಹಿರಿಯ ನಟ ಶಂಕರ್​ ರಾವ್​ ವಿಧಿವಶ; ಕಂಬನಿ ಮಿಡಿದ ಚಂದನವನ

ಡಿ.ಕೆ. ಶಿವಕುಮಾರ್ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಗೊತ್ತಿದೆ. ನೀರಾವರಿ ಹಾಗೂ ಜಲಸಂಪನ್ಮೂಲ ಖಾತೆ ಸಚಿವರಾಗಿದ್ದಾಗ ಭ್ರಷ್ಟಾಚಾರ ಆರೋಪ ಕೇಳಿಬಂದಿತ್ತು. ಇದೀಗ 8ರಿಂದ 12 ಪರ್ಸೆಂಟ್ ಕಮಿಷನ್ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಡಿ.ಕೆ. ಶಿವಕುಮಾರ್ ಭ್ರಷ್ಟಾಚಾರದ ಬಗ್ಗೆ ಗೊತ್ತಿದ್ದರೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿರುವ ರಾಹುಲ್ ಗಾಂಧಿ ವಿರುದ್ಧವೂ ದೂರು ನೀಡಲಾಗಿದೆ.

ಇನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ನೀರಾವರಿ ಇಲಾಖೆಯಲ್ಲಿ ಲಂಚ ಪಡೆದು ಗುತ್ತಿಗೆದಾರರಿಗೆ ಸಾವಿರಾರು ಕೋಟಿ ಬಿಡುಗಡೆ ಮಾಡಿರುವ ಆರೋಪವಿದ್ದು, ಎಲ್ಲಾ ನಾಯಕರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಆಲಂ ಪಾಷಾ, ಎಸಿಬಿಗೆ ದೂರು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...