alex Certify BIG NEWS: ಬಿ.ಎಸ್.ವೈ. ನಿರ್ಧಾರದ ಬಗ್ಗೆ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿ.ಎಸ್.ವೈ. ನಿರ್ಧಾರದ ಬಗ್ಗೆ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು….?

ಬೆಂಗಳೂರು: ಸ್ವಕ್ಷೇತ್ರ ಶಿಕಾರಿಪುರವನ್ನು ಮಗ ಬಿ.ವೈ.ವಿಜಯೇಂದ್ರಗೆ ಬಿಟ್ಟುಕೊಡುವ ಮೂಲಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯದಿಂದ ನಿವೃತ್ತಿ ನಿರ್ಧಾರ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಕೇವಲ ಚುನಾವಣೆಯಿಂದ ಹಿಂದೆ ಸರಿದಿದ್ದಾರಷ್ಟೇ ರಾಜಕಾರಣದಿಂದ ಅಲ್ಲ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಸಕ್ರಿಯ ರಾಜಕಾರಣದಲ್ಲಿ ಯಡಿಯೂರಪ್ಪ ಇದ್ದೇ ಇರ್ತಾರೆ. ವಯಸ್ಸಿನ ಕಾರಣಕ್ಕೆ ಅವರು ಹಾಗೆ ನಿರ್ಧಾರ ಮಾಡಿರಬಹುದು. ಸಂಘಪರಿವಾರದವರು ಅವರೊಂದಿಗೆ ಮಾತನಾಡುತ್ತಾರೆ ಎಂದರು.

ನನ್ನ ಪ್ರಕಾರ ಕೇವಲ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ರಾಜಕಾರಣದಿಂದ ಹಿಂದೆ ಸರಿದಿಲ್ಲ. ಒಂದು ವೇಳೆ ಪ್ರತಿಭಟನಾರ್ಥವಾಗಿ ಅಥವಾ ಬೇರೆ ಕಾರಣಕ್ಕೆ ಅವರು ಈ ನಿರ್ಧಾರ ಮಾಡಿದ್ದರೆ ಖಂಡಿತ ನಷ್ಟ. ವಯಸ್ಸಿನ ಕಾರಣಕ್ಕೆ ಅಥವಾ ವೈಯಕ್ತಿಕ ಕಾರಣದಿಂದ ಹೀಗೆ ಹೇಳಿರಬಹುದು. ಯಡಿಯೂರಪ್ಪ ಅವರನ್ನು ಸೈಡ್ ಲೈನ್ ಮಾಡುವ ಪ್ರಶ್ನೆ ಬರಲ್ಲ. ಅವರ ಮಾರ್ಗದರ್ಶನ ಎಲ್ಲರಿಗೂ ಅಗತ್ಯ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...