alex Certify BIG NEWS; ಬುಲ್ಡೋಜರ್ ಸಂಸ್ಕೃತಿ ರಾಜ್ಯದಲ್ಲಿ ತರಲು ಬಿಡಲ್ಲ; ಅಂತಹ ಯತ್ನ ನಡೆದರೆ ನಾವೇ ಹೋಗಿ ಬುಲ್ಡೋಜರ್ ಮುಂದೆ ಮಲಗಬೇಕಾಗುತ್ತೆ; ಡಿ.ಕೆ.ಶಿ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS; ಬುಲ್ಡೋಜರ್ ಸಂಸ್ಕೃತಿ ರಾಜ್ಯದಲ್ಲಿ ತರಲು ಬಿಡಲ್ಲ; ಅಂತಹ ಯತ್ನ ನಡೆದರೆ ನಾವೇ ಹೋಗಿ ಬುಲ್ಡೋಜರ್ ಮುಂದೆ ಮಲಗಬೇಕಾಗುತ್ತೆ; ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು: ಉತ್ತರ ಪ್ರದೇಶ ಸರ್ಕಾರದಂತೆ ರಾಜ್ಯದಲ್ಲಿ ಬುಲ್ಡೋಜರ್ ಸಂಸ್ಕೃತಿಗೆ ಅವಕಾಶ ನೀಡಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಚಿಕ್ಕಮಗಳೂರಿನಲ್ಲಿ ಈಗಾಗಲೇ ಬುಲ್ಡೋಜರ್ ಮೂಲಕ ಮನೆಗಳ ನೆಲಸಮ ಮಾಡಲಾಗುತ್ತಿದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿ, ಜನರನ್ನು ಹೆದರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಇಂತಹ ಕ್ರಮಕ್ಕೆ ಮುಂದಾಗುತ್ತಿದೆ. ದಬ್ಬಾಳಿಕೆ ಮೂಲಕ ಅಲ್ಪಸಂಖ್ಯಾತರನ್ನು ಹೆದರಿಸುವುದು ಕರ್ನಾಟಕದಲ್ಲಿ ನಡೆಯಲ್ಲ ಎಂದು ಗುಡುಗಿದರು.

ಒಂದು ವೇಳೆ ಸರ್ಕಾರ ಇಂತಹ ಕ್ರಮಕ್ಕೆ ಮುಂದಾದರೆ ನಾವೇ ಹೋಗಿ ಬುಲ್ಡೋಜರ್ ಮುಂದೆ ಮಲಗಿ ಪ್ರತಿಭಟಿಸುತ್ತೇವೆ. ಉತ್ತರ ಪ್ರದೇಶದ ಸರ್ಕಾರದ ರೀತಿ ಕರ್ನಾಟಕದಲ್ಲಿ ನಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...