alex Certify BIG NEWS: ಬೆಂಗಳೂರು, ಮೈಸೂರು ಬಳಿಕ ಬಳ್ಳಾರಿಯಲ್ಲಿಯೂ ಚಿರತೆ ಪ್ರತ್ಯಕ್ಷ; ಭಯಭೀತರಾದ ಪಿಜಿ ವಿದ್ಯಾರ್ಥಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರು, ಮೈಸೂರು ಬಳಿಕ ಬಳ್ಳಾರಿಯಲ್ಲಿಯೂ ಚಿರತೆ ಪ್ರತ್ಯಕ್ಷ; ಭಯಭೀತರಾದ ಪಿಜಿ ವಿದ್ಯಾರ್ಥಿಗಳು

ಬಳ್ಳಾರಿ: ಬೆಳಗಾವಿ, ಮೈಸೂರು, ಬೆಂಗಳೂರು ಬಳಿಕ ಇದೀಗ ಬಳ್ಳಾರಿಯಲ್ಲಿಯೂ ಚಿರತೆ ಪ್ರತ್ಯಕ್ಷವಾಗಿದೆ. ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪಿಜಿ ಸೆಂಟರ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ.

ಸಂಡೂರು ತಾಲೂಕಿನ ನಂದಿಹಳ್ಳಿ ಸ್ನಾತಕೋತ್ತರ ಕೆಂದ್ರದ ಪಿಜಿ ಸೆಂಟರ್ ನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಕಳೆದ ಎರಡು ದಿನಗಳಿಂದ ಇದೇ ಭಾಗದಲ್ಲಿ ಓಡಾಟ ನಡೆಸಿದೆ.

ಪಿಜಿ ಸೆಂಟರ್ ನ ಮೆಟ್ಟಿಲುಗಳ ಮೇಲೆ, ಸ್ನಾತಕೋತ್ತರ ಕೇಂದ್ರದ ಆವರಣದಲ್ಲಿಯೇ ಚಿರತೆ ಓಡಾಡುತ್ತಿದ್ದು, ಈ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿದ್ಯಾರ್ಥಿಗಳು ಜೀವಭಯದಲ್ಲಿ ಬದುಕುತ್ತಿದ್ದಾರೆ. ಚಿರತೆ ಸೆರೆಹಿಡಿಯಲು ಸ್ನಾತಕೋತ್ತರ ಕೇಂದ್ರದ ಸುತ್ತಮುತ್ತ ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಗಳನ್ನು ಇಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...