alex Certify BIG NEWS: ಬೆಳಗಾವಿ ಅಧಿವೇಶನಕ್ಕೂ ಮುನ್ನ ರೈತ ಅಧಿವೇಶನಕ್ಕೆ ಮುಂದಾದ ಅನ್ನದಾತರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಳಗಾವಿ ಅಧಿವೇಶನಕ್ಕೂ ಮುನ್ನ ರೈತ ಅಧಿವೇಶನಕ್ಕೆ ಮುಂದಾದ ಅನ್ನದಾತರು

ಬೆಳಗಾವಿ: ನಾಳೆಯಿಂದ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನಕ್ಕೂ ಮುನ್ನ ಅನ್ನದಾತರು ಇಂದು ರೈತ ಅಧಿವೇಶನ ನಡೆಸುತ್ತಿದ್ದಾರೆ.

ಚಿಂತಕ ಅಲ್ಲಮಪ್ರಭು ಬೆಟ್ಟದೂರು ಅಧ್ಯಕ್ಷತೆಯಲ್ಲಿ ಬೆಳಗಾವಿಯ ಕಣಬರ್ಗಿಯ ಸಂಕಲ್ಪ ಗಾರ್ಡನ್ ನಲ್ಲಿ ಬೆಳಿಗ್ಗೆ 11 ಗಂಟೆಗೆ ರೈತ ಅಧಿವೇಶನ ನಡೆಯಲಿದೆ. ಕೃಷಿ ಕಾಯ್ದೆ ಹೋರಾಟದಲ್ಲಿ ಮೃತಪಟ್ಟ ರೈತರಿಗೆ ಪರಿಹಾರ, ಕೃಷಿ ಕಾಯ್ದೆ ವಾಪಸ್ ಪಡೆಯುವ ಬಗ್ಗೆ ಅಧಿವೇಶನದಲ್ಲಿ ಅಧಿಕೃತ ಘೋಷಣೆ, ಕೃಷಿಕರ ಬಹುದಿನಗಳ ಬೇಡಿಕೆ ಹಕ್ಕೊತ್ತಾಯ, ನೆರೆ , ಬೆಳೆಹಾನಿಗೆ ಪರಿಹಾರ, ಪ್ರತಿಭಟನೆ ವೇಳೆ ರೈತರ ಮೇಲೆ ದಾಖಲಾದ ಕೇಸ್ ವಾಪಸ್, ರೈತರ ಸಮಸ್ಯೆಗಳಿಗೆ ಸ್ಪಂದನೆ ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ರೈತ ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ.

ಎನ್ ಕೌಂಟರ್ ನಲ್ಲಿ ಓರ್ವ ಉಗ್ರ ಫಿನಿಶ್

ರೈತ ಅಧಿವೇಶನದಲ್ಲಿ ನಡೆದ ನಿರ್ಣಯಗಳನ್ನು ಚಳಿಗಾಲದ ಅಧಿವೇಶನದ ವೇಳೆ ರೈತ ಮುಖಂಡರು ಸರ್ಕಾರಕ್ಕೆ ಮನವಿ ಮಾಡುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...