alex Certify BIG NEWS: ಬೆಳ್ಳಿತೆರೆಯ ಮೇಲೆ ಮೂಡಿಬರಲಿದೆ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಜೀವನ ಕಥೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಳ್ಳಿತೆರೆಯ ಮೇಲೆ ಮೂಡಿಬರಲಿದೆ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಜೀವನ ಕಥೆ

ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜೀವನಾಧಾರಿತ ಕಥೆಯ ಸಿನಿಮಾವನ್ನು ತಯಾರಿಸಲು ಸಿದ್ಧತೆ ನಡೆಯುತ್ತಿದೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಸಿದ್ದರಾಮಯ್ಯ ಜೀವನಕಥೆ ಬೆಳ್ಳಿತೆರೆಯ ಮೇಲೆ ಬರುತ್ತಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಸಿದ್ದರಾಮಯ್ಯ ಆಪ್ತ ಬೆಂಬಲಿಗ ಶಿವರಾಜ್ ತಂಗಡಗಿ ಹಾಗೂ ಅಭಿಮಾನಿಗಳು ಸಿದ್ದರಾಮಯ್ಯ ಅವರ ಸಿನಿಮಾ ಮಾಡಲು ಹೊರಟಿದ್ದಾರೆ. ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಈಗಾಗಲೇ ಮಾತುಕತೆಯನ್ನೂ ನಡೆಸಿದ್ದು, ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರದಲ್ಲೇ ಚಿತ್ರದ ಮುಹೂರ್ತ ನೆರವೇರಲಿದೆ ಎಂದು ತಿಳಿದುಬಂದಿದೆ.

20 ಕೋಟಿ ರೂಪಾಯಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣವಾಗಲಿದ್ದು, ಈಗಾಗಲೇ ಎರಡು ಬಾರಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಇನ್ನು ಸಿದ್ದರಾಮಯ್ಯ ಅವರ ಪಾತ್ರದಲ್ಲಿ ತಮಿಳು ನಟ ವಿಜಯ್ ಸೇತುಪತಿ ಅಭಿನಯಿಸುವ ಸಾಧ್ಯತೆ ದಟ್ಟವಾಗಿದೆ. ವಿಜಯ್ ಸೇತುಪತಿಯೊಂದಿಗೆ ಈ ನಿಟ್ಟಿನಲ್ಲಿ ಮಾತುಕತೆ ಕೂಡ ನಡೆದಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...