alex Certify BIG NEWS: ಬೇಜವಾಬ್ದಾರಿಯೇ ದುರಂತಕ್ಕೆ ಕಾರಣ; ನಟ ಅಜಯ್ ರಾವ್ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೇಜವಾಬ್ದಾರಿಯೇ ದುರಂತಕ್ಕೆ ಕಾರಣ; ನಟ ಅಜಯ್ ರಾವ್ ಆಕ್ರೋಶ

ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಫೈಟರ್ ಸಾವನ್ನಪ್ಪಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ನಟ ಅಜಯ್ ರಾವ್, ಬೇಜವಾಬ್ದಾರಿಯಿಂದಲೇ ದುರಂತ ಸಂಭವಿಸಿದೆ ಎಂದು ಕಿಡಿಕಾರಿದ್ದಾರೆ.

ಚಿತ್ರೀಕರಣದ ವೇಳೆ ಹೈಟೆನ್ ಶನ್ ವಿದ್ಯುತ್ ತಂತಿಗೆ ಮೆಟಲ್ ರೋಪ್ ಬಳಸಿ ಶೂಟಿಂಗ್ ಮಾಡಲಾಗಿದೆ. ಹಾಗಾಗಿ ಶಾಕ್ ಹೊಡೆದು ದುರಂತ ಸಂಭವಿಸಿದೆ. ನಾನು 5 ದಿನಗಳ ಹಿಂದೆಯೇ ಮೆಟಲ್ ರೋಪ್ ಬಳಸುವ ಬಗ್ಗೆ ಪ್ರಶ್ನಿಸಿ ಕೆಟ್ಟವನಾಗಿದ್ದೆ. ನಾವು ಪ್ರಶ್ನೆ ಮಾಡಿದರೆ ಕೋಪಕ್ಕೆ ಗುರಿಯಾಗಬೇಕಾಗುತ್ತೆ, ಮೂಗು ತೂರಿಸುತ್ತಾರೆ ಅಂತಾರೆ. ಮುಂಜಾಗೃತಾ ಕ್ರಮ ಕೈಗೊಳ್ಳದೇ ಇದ್ದುದರಿಂದಲೇ ಘಟನೆ ಸಂಭವಿಸಿದೆ. ಅಮಾಯಕ ವ್ಯಕ್ತಿ ಪ್ರಾಣ ಕಳೆದುಕೊಳ್ಳುವಂತಾಗಿದೆ ಎಂದು ಹೇಳಿದ್ದಾರೆ.

ಘಟನೆ ವೇಳೆ ನಾನು ಸ್ಥಳದಲ್ಲಿ ಇರಲಿಲ್ಲ 200 ಮೀಟರ್ ದೂರದಲ್ಲಿದ್ದೆ. ದುರಂತದ ವೇಳೆ ಜೋರಾದ ಸೌಂಡ್ ಆಗಿದೆ ಎದ್ದು ನೋಡುವಷ್ಟರಲ್ಲಿ ಗುಂಪು ಸೇರಿತ್ತು. ನಮ್ಮ ಹುಡುಗರು ಮಾಹಿತಿ ನೀಡಿದ್ದಾರೆ. ನಾನು ಯಾರನ್ನೂ ದೂರುತ್ತಿಲ್ಲ, ಆದರೆ ಬೇಜವಬ್ದಾರಿ ಇಂತಹ ದುರಂತಕ್ಕೆ ಕಾರಣವಾಗುತ್ತಿದೆ. ಹಾಗಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...