alex Certify BIG NEWS: ಬೇವು ಬಿತ್ತಿ ಮಾವು ಬಯಸಲು ಸಾಧ್ಯವೇ……? ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕುಟುಕಿದ ಬಿಜೆಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೇವು ಬಿತ್ತಿ ಮಾವು ಬಯಸಲು ಸಾಧ್ಯವೇ……? ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕುಟುಕಿದ ಬಿಜೆಪಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ರಾಜ್ಯ ಬಿಜೆಪಿ, ಬಿತ್ತಿದ್ದೇ ಬೆಳೆಯುತ್ತದೆ, ಬೇವು ಬಿತ್ತಿ ಮಾವು ಬಯಸಲು ಸಾಧ್ಯವೇ, ಅವಕಾಶವಾದಿ ಸಿದ್ದರಾಮಯ್ಯ? ಎಂದು ಕಿಡಿ ಕಾರಿದೆ.

ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಸೇರಿ ಹೊಟ್ಟೆಕಿಚ್ಚು ಬಿತ್ತಿದಿರಿ. ಖರ್ಗೆ, ಪರಮೇಶ್ವರ್, ಡಿಕೆಶಿ ಪ್ರತಿಸ್ಪರ್ಧಿಯಾಗುತ್ತಾರೆಂದು ಮೂಲೆಗುಂಪು ಮಾಡಿದಿರಿ. ಈಗ ಅದರ ಫಲ ಅನುಭವಿಸುತ್ತಿದ್ದೀರಿ. ಈ ಬಾರಿ ನಿಮಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಅಣಕಿಸಿದೆ.

ಸಿದ್ದರಾಮಯ್ಯ ಅವರೇ‌ ನಿಮ್ಮ ಬಗ್ಗೆ ಹೊಟ್ಟೆಕಿಚ್ಚಿರುವುದು ನಿಜ, ಆದರೆ ಅದು ನಿಮ್ಮ ಪಕ್ಷದವರಿಗೆ ಮಾತ್ರ! ಯಾವ ಪಕ್ಷದ ಬಗ್ಗೆಯೂ ನಿಷ್ಠೆಯಿಲ್ಲದೇ, ವಲಸೆಯನ್ನೇ ರಾಜಕೀಯ ಧ್ಯೇಯವಾಗಿಸಿಕೊಂಡಿದ್ದಕ್ಕಾಗಿ ನಿಮ್ಮ ಬಗ್ಗೆ ಅಸಹನೆ ಇದೆ ಎಂದು ಸರಣಿ ಟ್ವೀಟ್ ಮೂಲಕ ಬಿಜೆಪಿ ವಾಗ್ದಾಳಿ ನಡೆಸಿದೆ.

ಸಿದ್ದರಾಮಯ್ಯನವರ ಬಗ್ಗೆ ಕಾಂಗ್ರೆಸ್ಸಿಗರಿಗೆ ಹೊಟ್ಟೆಕಿಚ್ಚು, ಏಕೆ ಗೊತ್ತೇ? ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ಸಿಗೆ ವಲಸೆ ಬಂದು ಕೇವಲ ಹತ್ತು ವರ್ಷದಲ್ಲೇ ಮುಖ್ಯಮಂತ್ರಿಯಾಗಿದ್ದನ್ನು ಮೂಲ ಕಾಂಗ್ರೆಸ್ಸಿಗರು ತಡೆದುಕೊಳ್ಳಲು ಹೇಗೆ ಸಾಧ್ಯ? ಸಿದ್ದರಾಮಯ್ಯನವರ ಬಗ್ಗೆ ಕಾಂಗ್ರೆಸ್ಸಿಗರಿಗೆ ಹೊಟ್ಟೆಕಿಚ್ಚು, ಏಕೆ ಗೊತ್ತೇ? ಕಾಂಗ್ರೆಸ್ ಹಿರಿಯ ನಾಯಕರನ್ನು ಮೂಲೆಗುಂಪು ಮಾಡಿದ್ದಕ್ಕಾಗಿ. ಮೂಲ‌ ಕಾಂಗ್ರೆಸ್ಸಿಗರು ನಾಚುವ ರೀತಿಯಲ್ಲಿ ದಿಲ್ಲಿ ಸೇವೆ ಮಾಡಿದ್ದಕ್ಕಾಗಿ. ನಕಲಿ ಗಾಂಧಿ ಕುಟುಂಬದ ಗುಲಾಮರಾಗಿದ್ದಕ್ಕಾಗಿ ಎಂದು ಹೇಳಿದೆ.

ಸಿದ್ದರಾಮಯ್ಯನವರೇ, ನಿಮ್ಮ ಬಗ್ಗೆ ಸ್ವಪಕ್ಷೀಯರಲ್ಲಿರುವುದು ಹೊಟ್ಟೆಕಿಚ್ಚು ಮಾತ್ರವಲ್ಲ, ದ್ವೇಷವೂ ಇದೆ. ಈ ಕಾರಣಕ್ಕಾಗಿಯೇ ನೀವು ಈ ಬಾರಿ ಎಲ್ಲೇ ನಿಂತರೂ ಒಳ ಏಟಿನ‌ ರುಚಿ ತೋರಿಸಲು ಸಿದ್ದರಾಗಿದ್ದಾರೆ. ಕ್ಷೇತ್ರ ಹುಡುಕುವಾಗ ಎಚ್ಚರದಿಂದಿರಿ. ಯೋಚಿಸಿ ವಲಸೆ ನಿರ್ಧರಿಸಿ. ವ್ಯಕ್ತಿ ಗೆಲ್ಲುತ್ತಾನೆ ಎಂದಾಗ ಸೋಲಿಸಲು ತುಂಬಾ ಜನ ಪ್ರಯತ್ನಿಸುವುದು ಸಹಜ, 2013 ರಲ್ಲಿ ನೀವು ಮಾಡಿದ್ದು ಅದನ್ನೇ ಅಲ್ಲವೇ ಸಿದ್ದರಾಮಯ್ಯ?

ಚಾಮುಂಡೇಶ್ವರಿ ಸೋಲಿನ ಭೀತಿ ಇನ್ನೂ ಮಾಸಿಲ್ಲ, ಅದಕ್ಕಾಗಿ ಹೋದಲ್ಲೆಲ್ಲಾ ಜೈಕಾರ ಹಾಕಿಸಿಕೊಳ್ಳುತ್ತಿದ್ದೀರಿ. ಅಷ್ಟಕ್ಕೂ ನೀವು ಮುಂದೆ ಎಲ್ಲಿ ನಿಂತು ಗೆಲ್ಲುತ್ತೀರಿ? ಎಂದು ವ್ಯಂಗ್ಯವಾಗಿ ಪ್ರಶ್ನಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...