alex Certify BIG NEWS: ಬೈಕ್ ಹಿಂಬದಿ ಸವಾರರಿಗೆ ನಿರ್ಬಂಧ ಆದೇಶ ವಾಪಸ್; ಸ್ಪಷ್ಟನೆ ನೀಡಿದ ಕಮೀಷನರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೈಕ್ ಹಿಂಬದಿ ಸವಾರರಿಗೆ ನಿರ್ಬಂಧ ಆದೇಶ ವಾಪಸ್; ಸ್ಪಷ್ಟನೆ ನೀಡಿದ ಕಮೀಷನರ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಜಾರಿಗೆ ತರಲು ಉದ್ದೇಶಿಸಿದ್ದ ದ್ವಿಚಕ್ರವಾಹನ ಸವಾರರಿಗೆ ಹೊಸ ನಿಯಮ ಆದೇಶ ವಾಪಸ್ ಪಡೆಯಲಾಗಿದೆ.

ಜಿಲ್ಲೆಯಲ್ಲಿನ ಸರಣಿ ಹತ್ಯೆ ಪ್ರಕರಣದ ಬೆನ್ನಲ್ಲೇ ಹಿಂಸೆ ತಡೆಗಟ್ಟುವ ಮತ್ತೊಂದು ಪ್ರಯತ್ನದ ಭಾಗವಾಗಿ ಬೈಕ್ ಹಿಂಬದಿ ಸವಾರರಿಗೆ ನಿರ್ಬಂಧ ವಿಧಿಸಿ ಕಾನೂನು ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದರು. ನಾಳೆಯಿಂದಲೇ ಈ ನಿಯಮ ಜಾರಿಗೆ ಬರಲಿದೆ ಎಂದು ತಿಳಿಸಿದ್ದರು. ಆದರೆ ಬೆಳಿಗ್ಗೆಯಷ್ಟೇ ಹೊರಡಿಸಲಾಗಿದ್ದ ಈ ಆದೇಶವನ್ನು ಸಂಜೆ ವೇಳೆಗೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ.

ಈ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಸ್ಪಷ್ಟನೆ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಜಾರಿಗೆ ಬರಲಿದ್ದ ಬೈಕ್ ಹಿಂಬದಿಯಲ್ಲಿ ಪುರುಷ ಸವಾರರಿಗೆ ನಿರ್ಬಂಧ ಆದೇಶ ಹಿಂಪಡೆಯಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಸಾಕಷ್ಟು ನಿರ್ಬಂಧಗಳಿವೆ. ಸಧ್ಯಕ್ಕೆ ಹೊಸ ನಿಯಮದ ಅಗತ್ಯವಿಲ್ಲ, ಅಗತ್ಯವಿದ್ದರೆ ಮುಂದಿನ ದಿನಗಳಲ್ಲಿ ಈ ನಿಯಮ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...