alex Certify BIG NEWS: ಭಾರತ್ ಜೋಡೊ ಪಾದಯಾತ್ರೆ ಫ್ಯಾಮಿಲಿ ಪ್ಯಾಕ್ ಪಾದಯಾತ್ರೆ; ಸಚಿವ ಆರ್.ಅಶೋಕ್ ವ್ಯಂಗ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರತ್ ಜೋಡೊ ಪಾದಯಾತ್ರೆ ಫ್ಯಾಮಿಲಿ ಪ್ಯಾಕ್ ಪಾದಯಾತ್ರೆ; ಸಚಿವ ಆರ್.ಅಶೋಕ್ ವ್ಯಂಗ್ಯ

ರಾಯಚೂರು: ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯಕ್ಕೆ ಅರಕೇರಾ ಗ್ರಾಮ | Revenue minister R Ashok grama vastavya at Arakera in Raichur district On October 15th - Kannada Oneindia

ರಾಯಚೂರು: ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಭಾರತ್ ಜೋಡೊ ಯಾತ್ರೆ ಗಣಿ ನಾಡು ಬಳ್ಳಾರಿ ತಲುಪಿದ್ದು, ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿರುವ ಕಂದಾಯ ಸಚಿವ ಆರ್.ಅಶೋಕ್, ಇದು ಭಾರತ್ ಜೋಡೋ ಯಾತ್ರೆಯಲ್ಲ ಫ್ಯಾಮಿಲಿ ಪ್ಯಾಕ್ ಪಾದಯಾತ್ರೆ, ಈ ಹಿಂದೆ ಸಿದ್ದರಾಮಯ್ಯ ಬಳ್ಳಾರಿವರೆಗೂ ಪಾದಯಾತ್ರೆ ಮಾಡಿದರು. ಆದರೆ ಏನಾಯಿತು? ಬಂಡೆ ಎಂದು ಕರೆಯುತ್ತೀರಲ್ಲಾ ಡಿ,ಕೆ.ಶಿ ಪಾದಯಾತ್ರೆ ಮಾಡಿದರು ಏನಾದರೂ ಬದಲಾವಣೆಯಾಯಿತಾ? ಈಗ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಎಲ್ಲರೂ ಬಂದು ಭಾರತ್ ಜೋಡೋ ಮಾಡುತ್ತಿದ್ದಾರೆ ಇದೂ ಕೂಡ ಯಾವುದೇ ಪರಿಣಾಮ ಬೀರಲ್ಲ ಎಂದು ಹೇಳಿದರು.

ಭಾರತ್ ಜೋಡೋ ಯಾತ್ರೆ ಮೂಲಕ ಈಗ ಹಸು, ಕರು ಗುರುತು ಮತ್ತೆ ಬಂದಿದೆ. ಎಲ್ಲರೂ ಬಂದು ಪಾದಯಾತ್ರೆ ಮಾಡಿದರೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲ್ಲ. ಸಿದ್ದರಾಮಯ್ಯ ಪ್ರಧಾನಿ ಮೋದಿ ಬಗ್ಗೆ ಮಾತನಾಡುತ್ತಾರೆ. ಪಾಕಿಸ್ತಾನಕ್ಕೆ ಹೋಗಿ ಕೇಳಿ ಮೋದಿ ಯಾರೆಂದು ಹೇಳ್ತಾರೆ. ಚೀನಾಗೆ ಹೋಗಿ ಕೇಳಿ ಅವರೂ ಹೇಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...