alex Certify BIG NEWS: ಭಾರತ್ ಜೋಡೋ ಬಿಜೆಪಿ ಯಾತ್ರೆಯ ಕಾಪಿ ಎಂದ ಶಿಕ್ಷಣ ಸಚಿವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರತ್ ಜೋಡೋ ಬಿಜೆಪಿ ಯಾತ್ರೆಯ ಕಾಪಿ ಎಂದ ಶಿಕ್ಷಣ ಸಚಿವ

ಮಡಿಕೇರಿ: ಭಾರತ್ ಜೋಡೋ ಯಾತ್ರೆ ಬಗ್ಗೆ ತಿರುಗೇಟು ನೀಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಬಿಜೆಪಿ ಯಾತ್ರೆಯನ್ನೇ ಕಾಪಿ ಮಾಡಿ ಕಾಂಗ್ರೆಸ್ ನವರು ಭಾರತ್ ಜೋಡೋ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಮಡಿಕೇರಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಕಾಂಗ್ರೆಸ್ ನಾಯಕರಿಗೆ ಟೀ ಅಂಗಡಿಗಳು ಹೇಗಿರುತ್ತೆ? ಮಕ್ಕಳು ಹೇಗೆ ಬೆಳೆಯುತ್ತವೆ ಎಂಬುದೂ ಗೊತ್ತಿರಲಿಲ್ಲ. ಈಗ ಎಲ್ಲವನ್ನೂ ನೋಡುತ್ತಿದ್ದಾರೆ. ವೋಟಿಗಾಗಿ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದಾರೆ. ಬಿಜೆಪಿಯವರಿಗೆ ಪಾದಯಾತ್ರೆಗಳು ಹೊಸದಲ್ಲ, ನಮ್ಮ ಹಲವು ಯಾತ್ರೆಗಳನ್ನು ಕಾಂಗ್ರೆಸ್ ನವರು ಕಾಪಿ ಮಾಡಿದ್ದಾರೆ ಎಂದರು.

ನಿನ್ನೆ ನನ್ನ ಕ್ಷೇತ್ರದಲ್ಲಿ ಜನರು ವಾಲ್ಮಿಕಿ ಭಾವಚಿತ್ರ ಹಿಡಿದು ಕಾಯುತ್ತಿದ್ದರೆ ರಾಹುಲ್ ಗಾಂಧಿ ಅತ್ತ ತಿರುಗಿಯೂ ನೋಡಿಲ್ಲ. ರಾಹುಲ್ ಗಾಂಧಿ ಅಲ್ಲ ಕೊನೇ ಪಕ್ಷ ರಾಜ್ಯದ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ,ಕೆ.ಶಿವಕುಮಾರ್, ಪರಮೇಶ್ವರ್ ಆದರೂ ಗಮನಿಸಬೇಕಿತ್ತು. ಆದರೆ ಅವರು ಕೂಡ ಅತ್ತ ತಿರುಗಿಲ್ಲ. ನನ್ನ ಕ್ಷೇತ್ರದಲ್ಲಿ ವಾಲ್ಮೀಕಿ ಅವರಿಗೆ ಅವಮಾನ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...