alex Certify BIG NEWS: ಭಾರಿ ಮಳೆಗೆ ಕೊಚ್ಚಿ ಹೋದ ರಾಜ್ಯ ಹೆದ್ದಾರಿ; ಶೃಂಗೇರಿ-ಆಗುಂಬೆ ಸಂಪರ್ಕ ಕಡಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರಿ ಮಳೆಗೆ ಕೊಚ್ಚಿ ಹೋದ ರಾಜ್ಯ ಹೆದ್ದಾರಿ; ಶೃಂಗೇರಿ-ಆಗುಂಬೆ ಸಂಪರ್ಕ ಕಡಿತ

ಚಿಕ್ಕಮಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಚಿಕ್ಕಮಗಳೂರಿನಲ್ಲಿ ಭಾರಿ ವರ್ಷ ಧಾರೆಗೆ ರಾಜ್ಯ ಹೆದ್ದಾರಿಯೇ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.

ಧಾರಾಕಾರ ಮಳೆಯಿಂದಾಗಿ ಚಿಕ್ಕಮಗಳೂರಿನ ಶೃಂಗೇರಿಯ ನೇರಳೆಕೊಡಿಗೆ ಬಳಿ ಹೆದ್ದಾರಿ ಕೊಚ್ಚಿ ಹೋಗಿದ್ದು, ಸಂಚಾರ ಮಾರ್ಗವೇ ಸಂಪೂರ್ಣ ಬಂದ್ ಆಗಿದೆ. 100 ಅಡಿಗಳಷ್ಟು ರಸ್ತೆ ಕುಸಿದಿದ್ದು, ಮಾರ್ಗ ಮಧ್ಯೆಯೇ ರಸ್ತೆ ಬಾವಿಯಂತಾಗಿದೆ.

ರಾಜ್ಯ ಹೆದ್ದಾರಿ ಕೊಚ್ಚಿ ಹೋಗಿರುವುದರಿಂದ ಶೃಂಗೇರಿ ಹಾಗೂ ಆಗುಂಬೆ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಚಿಕ್ಕಮಗಳೂರಿನಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಮನೆಗಳ ಮೇಲ್ಛಾವಣಿಗಳೇ ಹಾರಿ ಹೋಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...