alex Certify BIG NEWS: ಭಾರಿ ಮಳೆಯಿಂದಾಗಿ ಮತ್ತೆ ಸಂಕಷ್ಟಕ್ಕೆ ಸಿಲುಕಿದ ಬೆಂಗಳೂರು ಜನ; ರಸ್ತೆಗಳು ಜಲಾವೃತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರಿ ಮಳೆಯಿಂದಾಗಿ ಮತ್ತೆ ಸಂಕಷ್ಟಕ್ಕೆ ಸಿಲುಕಿದ ಬೆಂಗಳೂರು ಜನ; ರಸ್ತೆಗಳು ಜಲಾವೃತ

ಬುಧವಾರದಂದು ರಾಜ್ಯ ರಾಜಧಾನಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜನ ಸಂಕಷ್ಟಕ್ಕೆ ಸಿಲುಕಿದ್ದರು. ಸಂಜೆ ಜನದಟ್ಟಣೆ ಇರುವ ಸಂದರ್ಭದಲ್ಲಿ ಮಳೆ ಆರಂಭವಾದ ಕಾರಣ ಮನೆ ಸೇರಲು ಪರದಾಟ ನಡೆಸಿದ್ದಾರೆ.

ಸಂಜೆ 7:30 ಸುಮಾರಿಗೆ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಆರಂಭವಾಗಿದ್ದು, ಇದರ ಪರಿಣಾಮ ರಸ್ತೆಗಳು ಜಲಾವೃತವಾದವು. ಅಲ್ಲದೆ ತಗ್ಗು ಪ್ರದೇಶದ ಮನೆಗಳಿಗೂ ಸಹ ನೀರು ನುಗ್ಗಿದೆ.

ಕೆಲ ದಿನಗಳ ಹಿಂದಷ್ಟೇ ಭಾರಿ ಮಳೆಯ ಕಾರಣ ತೀವ್ರ ಸಂಕಷ್ಟ ಎದುರಿಸಿದ್ದ ಬೆಂಗಳೂರಿನ ಜನತೆ, ಈಗ ಹವಾಮಾನ ಇಲಾಖೆ ಮತ್ತೆ ಮೂರು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ ಎಂದು ಹೇಳಿರುವುದರಿಂದ ಆತಂಕಕ್ಕೆ ಒಳಗಾಗಿದ್ದಾರೆ.

— Thadhagath Pathi (@PathiThadhagath) October 19, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...