alex Certify BIG NEWS: ಭೀಕರ ರಸ್ತೆ ಅಪಘಾತ; ನವವರ ಸಾವು; ನವವಧುವಿನ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ರಸ್ತೆ ಅಪಘಾತ; ನವವರ ಸಾವು; ನವವಧುವಿನ ಸ್ಥಿತಿ ಗಂಭೀರ

ದಾವಣಗೆರೆ: 15 ದಿನಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ನವಜೋಡಿ ಬಾಳಲ್ಲಿ ವಿಧಿ ಅಟ್ಟಹಾಸ ಮೆರೆದಿದ್ದು, ಭೀಕರ ರಸ್ತೆ ಅಪಘಾತದಲ್ಲಿ ವರ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ಬಳಿ ನಡೆದಿದೆ.

ನವೆಂಬರ್ 28ರಂದು ದಾವಣಗೆರೆ ಮೂಲದ ಸಾಫ್ಟ್ ವೇರ್ ಎಂಜಿನಿಯರ್ ಸಂಜಯ್ ಹಾಗೂ ಗದಗ ಮೂಲದ 25 ವರ್ಷದ ಪ್ರೀತಿ ಅದ್ಧೂರಿಯಾಗಿ ವಿವಾಹವಾಗಿದ್ದರು. ವಿವಾಹದ ಬಳಿಕ ಮುರುಡೇಶ್ವರಕ್ಕೆ ಬೈಕ್ ನಲ್ಲಿ ಜಾಲಿ ರೈಡ್ ಹೋಗಿದ್ದರು. ಈ ವೇಳೆ ಹಿರೇಕೇರೂರು ಬಳಿ ಬೈಕ್ ಅಪಘಾತಕ್ಕೀಡಾಗಿ ನವದಂಪತಿಗಳು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಅಪಘಾತಕ್ಕೀಡಾಗಿದ್ದ ವರ ಸಂಜಯ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪತ್ನಿ ಪ್ರೀತಿ ಗಂಭೀರವಾಗಿ ಗಾಯಗೊಂಡು ಐಸಿಯುಗೆ ದಾಖಲಾಗಿದ್ದು, ಪತಿಯ ಅಂತಿಮ ದರ್ಶನ ಪಡೆಯಲೆಂದು ಸ್ಟ್ರೆಚರ್ ನಲ್ಲಿಯೇ ಆಗಮಿಸಿದ್ದು, ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...