alex Certify BIG NEWS: ಭೋಜನಕೂಟಕ್ಕೆ ಗೈರಾದ ಬಿಜೆಪಿ ಹಲವು ನಾಯಕರು; ಅಂತರ ಕಾಯ್ದುಕೊಂಡ ಮಾಜಿ ಸಚಿವ ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೋಜನಕೂಟಕ್ಕೆ ಗೈರಾದ ಬಿಜೆಪಿ ಹಲವು ನಾಯಕರು; ಅಂತರ ಕಾಯ್ದುಕೊಂಡ ಮಾಜಿ ಸಚಿವ ಈಶ್ವರಪ್ಪ

ಬೆಂಗಳೂರು; ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಬಿಜೆಪಿ ಶಾಸಕರು, ಸಚಿವರು, ಸಂಸದರಿಗೆ ಭೋಜನಕೂಟ ಆಯೋಜಿಸಿದ್ದು, ಆದರೆ ಬಿಜೆಪಿ ಕೆಲ ನಾಯಕರು ಭೋಜನ ಕೂಟಕ್ಕೆ ಗೈರಾಗಿರುವುದು ಚರ್ಚೆಗೆ ಕಾರಣವಾಗಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರಿ ನಿವಾಸದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಹಾಗೂ ರಾಜ್ಯ ಬಿಜೆಪಿ ನಾಯಕರಿಗೆ ಭೋಜನ ಕೂಟ ಆಯೋಜಿಸಲಾಗಿದ್ದು, ಭೋಜನ ಕೂಟಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗೈರಾಗಿದ್ದಾರೆ.

ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಂಡಿರುವ ಈಶ್ವರಪ್ಪ, ಇದೀಗ ಸಿಎಂ ಆಯೋಜಿಸಿದ್ದ ಭೋಜನ ಕೂಟದಿಂದಲೂ ದೂರ ಉಳಿದಿದ್ದಾರೆ.

ಇನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಸಿಎಂ ರಾಜಕೀಯ ಕಾರ್ಯದರ್ಶಿ ಶಾಸಕ ರೇಣುಕಾಚಾರ್ಯ, ಸಚಿವ ಮಾಧುಸ್ವಾಮಿ ಕೂಡ ಭೋಜನ ಕೂಟಕ್ಕೆ ಗೈರಾಗಿರುವುದು ಗಮನ ಸೆಳೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...