alex Certify BIG NEWS: ಮಂಗಳೂರು ಬಾಂಬ್ ಸ್ಫೋಟ ಪ್ರಕರಣ; ಶಂಕಿತ ಉಗ್ರನ ಬೆನ್ನಿಗೆ ನಿಂತ ಉಗ್ರ ಸಂಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಂಗಳೂರು ಬಾಂಬ್ ಸ್ಫೋಟ ಪ್ರಕರಣ; ಶಂಕಿತ ಉಗ್ರನ ಬೆನ್ನಿಗೆ ನಿಂತ ಉಗ್ರ ಸಂಘಟನೆ

 

ಮಂಗಳೂರು ಸ್ಫೋಟ: ಶಾರಿಕ್​​​ ಟೆಕ್ನಾಲಜಿ ಬಳಕೆಯಲ್ಲಿ ಪರಿಣತ; ತನಿಖಾಧಿಕಾರಿಗಳನ್ನೂ ಮೀರಿಸುವ ತಂತ್ರಗಾರಿಕೆ ಗೊತ್ತು! - ವಿಸ್ತಾರ ನ್ಯೂಸ್

ಮಂಗಳೂರು: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಹಿಂದೆ ಉಗ್ರ ಸಂಘಟನೆಯೊಂದು ಇರುವುದು ಖಚಿತವಾಗಿದ್ದು, ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಎಂಬ ಸಂಘಟನೆ ಶಂಕಿತ ಉಗ್ರ ಶಾರಿಕ್ ನನ್ನು ಸಮರ್ಥಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿದೆ.

ಅರೇಬಿಕ್ ಭಾಷೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಸಂಘಟನೆ, ಶಂಕಿತ ಉಗ್ರ ಶಾರಿಕ್ ನಮ್ಮ ಸಹೋದರ. ನಮ್ಮ ದಾಳಿ ಕದ್ರಿ ದೇವಸ್ಥಾನವಾಗಿತ್ತು. ಆದರೆ ಉದ್ದೇಶಿತ ಗುರಿ ತಲುಪುವ ಮೊದಲೇ ಬಾಂಬ್ ಸ್ಫೋಟಗೊಂಡಿದೆ ಎಂದು ಹೇಳಿಕೊಂಡಿದೆ.

ಅಲ್ಲದೇ ದಬ್ಬಾಳಿಕೆ ಫಲವನ್ನು ಅನುಭವಿಸುತ್ತೀರಿ. ಗುಂಪು ಹತ್ಯೆ, ದಬ್ಬಾಳಿಕೆ ಶಾಸನಗಳು, ಧರ್ಮದಲ್ಲಿ ಹಸ್ತಕ್ಷೇಪ ಮಾಡಿ ನಮ್ಮ ಮೇಲೆ ಯುದ್ಧ ಸಾರಲಾಗಿದೆ. ಇದಕ್ಕೆ ಪ್ರತಿಯಾಗಿ ದಾಳಿ ನಡೆಸಲಾಗುತ್ತದೆ ಎಂದು ಸಂಘಟನೆ ಎಚ್ಚರಿಕೆ ಸಂದೇಶ ರವಾನಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...