alex Certify BIG NEWS: ಮಂಡ್ಯದಲ್ಲಿ ಸ್ಪರ್ಧೆ ಬಗ್ಗೆ ಸ್ಪಷ್ಟನೆ ನೀಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಂಡ್ಯದಲ್ಲಿ ಸ್ಪರ್ಧೆ ಬಗ್ಗೆ ಸ್ಪಷ್ಟನೆ ನೀಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ರಾಮನಗರ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ ವಿಧಾನಸಭಾ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಲಿದ್ದಾರೆ ಎಂಬ ವದಂತಿ ಹಬ್ಬಿದ್ದು, ಈ ಬಗ್ಗೆ ಸ್ವತಃ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನಾನು ಮಂಡ್ಯದಿಂದ ಸ್ಪರ್ಧೆ ಮಾಡುವುದಿಲ್ಲ. ಕುಮಾರಸ್ವಾಮಿ ಮಂಡ್ಯದಲ್ಲಿ ಸ್ಪರ್ಧಿಸ್ತಾರೆ ಎಂದಿದ್ದು ಯಾರು? ಈಗಾಗಲೇ ನಾನು ಚೆನ್ನಪಟ್ಟಣದಿಂದ ನಾಮಪತ್ರ ಸಲ್ಲಿಸಿದ್ದೇನೆ. ಜನರಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡಬಾರದು ಎಂದರು.

ಮಂಡ್ಯದಲ್ಲಿ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೆ ಸಂಸದೆ ಸುಮಲತಾ ಕುಮಾರಸ್ವಾಮಿ ವಿರುದ್ಧ ಸ್ಪರ್ಧೆ ಮಾಡಲಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಹೆಚ್.ಡಿ.ಕೆ, ನಾನು ಸುಮಲತಾ ಅವರಷ್ಟು ದೊಡ್ಡ ವ್ಯಕ್ತಿಯಲ್ಲ. ಮಂಡ್ಯದಲ್ಲಿ ಸಾಮಾನ್ಯ ರೈತ ಮನೆ ಮಗಳನ್ನು ನಿಲ್ಲಿಸಿ ಗೆಲ್ಲಿಸುತ್ತೇವೆ ಎಂದು ಹೇಳಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Только гении могут найти Найдите 3 различия на картинках с зайцами для людей Как пройти по крыше: