alex Certify BIG NEWS: ಮಕ್ಕಳನ್ನು ನೋಡಲು ಬಿಡಲಿಲ್ಲ ಎಂದು ಮಡದಿ ಮಕ್ಕಳ ಸಮೇತ ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಕ್ಕಳನ್ನು ನೋಡಲು ಬಿಡಲಿಲ್ಲ ಎಂದು ಮಡದಿ ಮಕ್ಕಳ ಸಮೇತ ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ

ಹಾಸನ: ಮಕ್ಕಳನ್ನು ನೋಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಇಲ್ಲೊಬ್ಬ ಪತಿ ಮಹಾಶಯ ಮಡದಿ, ಮಕ್ಕಳ ಸಮೇತ ಮನೆಗೆ ಬೆಂಕಿ ಹಚ್ಚಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಅಂಕನಹಳ್ಳಿಯ ರಂಗಸ್ವಾಮಿ ಹಾಗೂ ಗೀತಾ ದಂಪತಿ ಆಸ್ತಿ ವಿಚಾರವಾಗಿ ಪರಸ್ಪರ ಜಗಳವಾಗಿ ಇಬ್ಬರೂ ದೂರವಾಗಿದ್ದರು. ಮಕ್ಕಳಾದ 7 ವರ್ಷದ ಚಿರಂತನ್, 5 ವರ್ಷದ ನಂದನ್ ಇಬ್ಬರು ತಾಯಿಯೊಂದಿಗೆ ವಾಸವಾಗಿದ್ದರು. ತಂದೆ ರಂಗಸ್ವಾಮಿ ಆಗಾಗ ಮಕ್ಕಳನ್ನು ನೋಡಲೆಂದು ಮನೆಗೆ ಬರುತ್ತಿದ್ದ.

ಆದರೆ ಮಕ್ಕಳನ್ನು ನೋಡಲು ಈ ಬಾರಿ ಪತ್ನಿ ಬಿಟ್ಟಿರಲಿಲ್ಲ. ಇದರಿಂದ ಕೋಪಗೊಂಡ ರಂಗಸ್ವಾಮಿ, ಮನೆಗೆ ಬೆಂಕಿ ಹಚ್ಚಿದ್ದಾನೆ. ಬೆಂಕಿಯ ಕೆನ್ನಾಲಿಗೆಗೆ ಮನೆಯ ಬಹುತೇಕ ಭಾಗಗಳು, ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಪತ್ನಿ ಗೀತಾ ಹಾಗೂ ಮಕ್ಕಳಾದ ಚಿರಂತನ್, ನಂದನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...