alex Certify BIG NEWS: ಮಗು ಕೊಂದು ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣ; ಮೂವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಗು ಕೊಂದು ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣ; ಮೂವರು ಅರೆಸ್ಟ್

ಬೆಂಗಳೂರು: 9 ತಿಂಗಳ ಮಗುವನ್ನು ಕೊಂದು ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಿಕಾ ಸಂಪಾದಕ ಹಲ್ಲೆಗೆರೆ ಶಂಕರ್ ಹಾಗೂ ಅವರ ಇಬ್ಬರು ಅಳಿಯಂದಿರನ್ನು ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಆರೋಪಿಗಳಾದ ಹಲ್ಲೆಗೆರೆ ಶಂಕರ್, ಅಳಿಯಂದಿರಾದ ಶ್ರೀಕಾಂತ್ ಹಾಗೂ ಪ್ರವೀಣ್ ನನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ 306 ಅಡಿ ಆರೋಪ ಪಟ್ಟಿ ದಾಖಲಿಸಲಾಗಿದೆ.

ಶಂಕರ್ ಅವರ ಪತ್ನಿ ಭಾರತಿ, ಮಕ್ಕಳಾದ ಮಧು ಸಾಗರ್, ಸಿಂಚನಾ ಹಾಗೂ ಸಿಧೂರಾಣಿ ಬ್ಯಾಡರಹಳ್ಳಿಯಲ್ಲಿನ ಐಷಾರಾಮಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಮಗಳು ಸಿಂಧೂರಾಣಿ ತನ್ನ 9 ತಿಂಗಳ ಮಗುವನ್ನು ಉಸಿರುಗಟ್ಟಿಸಿ ಸಾಯಿಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಮೂವರು ಮಕ್ಕಳು ಡೆತ್ ನೋಟ್ ಬರೆದಿಟ್ಟಿದ್ದು, ಸಿಂಚನಾ ಹಾಗೂ ಸಿಂಧೂರಾಣಿ ಇಬ್ಬರೂ ತಮ್ಮ ಗಂಡಂದಿರ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಹಲ್ಲೆ ಆರೋಪ ಮಾಡಿದ್ದರು.

ಪ್ರಕರಣ ಸಂಬಂಧ ಮೂರು ಲ್ಯಾಪ್ ಟಾಪ್, ನಾಲ್ಕು ಮೊಬೈಲ್ ಹಾಗೂ ಮೂರು ಡೆತ್ ನೋಟ್ ಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಇದೀಗ ಮೂವರನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...