alex Certify BIG NEWS: ಮತದಾರರ ಪಟ್ಟಿಯಿಂದ ಹಲವರ ಹೆಸರು ಡಿಲಿಟ್ ವಿಚಾರ; ಯಾವ ಮತದಾರರನ್ನೂ ಕೈಬಿಟ್ಟಿಲ್ಲ ಎಂದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತದಾರರ ಪಟ್ಟಿಯಿಂದ ಹಲವರ ಹೆಸರು ಡಿಲಿಟ್ ವಿಚಾರ; ಯಾವ ಮತದಾರರನ್ನೂ ಕೈಬಿಟ್ಟಿಲ್ಲ ಎಂದ ಸಿಎಂ

ಧಾರವಾಡ: ರಾಜ್ಯಾದ್ಯಂತ ಮತದಾರರ ಪಟ್ಟಿ ಪರೀಷ್ಕರಣೆಯಲ್ಲಿ ಅಕ್ರಮ ನಡೆದಿದೆ. ಅನಧಿಕೃತ ಸಮೀಕ್ಷೆಗಳು ಕಂಡು ಬಂದಿದ್ದು, ಅಲ್ಪಸಂಖ್ಯಾತ ಮತದಾರರನ್ನು ಡಿಲೀಟ್ ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಇದು ಸುಳ್ಳು ಆರೋಪ ಎಂದು ಹೇಳಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಯಾವ ಮತದಾರರನ್ನೂ ಕೈಬಿಟ್ಟಿಲ್ಲ. ಈಗಾಗಲೇ ರಾಜ್ಯ ಚುನಾವಣಾ ಆಯೋಗ ಈ ಬಗ್ಗೆ ಗಮನ ಹರಿಸಿದೆ. ಚುನಾವಣಾ ಆಯೋಗದ ನೇತೃತ್ವದಲ್ಲಿಯೇ ಮತದಾರರ ಪಟ್ಟಿ ಪರಿಷ್ಕರಣೆಯಾಗುತ್ತದೆ ಎಂದರು.

ಹಲವೆಡೆ ಅನಧಿಕೃತವಾಗಿ ಮತದಾರರನ್ನು ಸೇರಿಸುವ ಕೆಲಸವೂ ಆಗಿದೆ. ಎರಡು ಕಡೆಗಳಲ್ಲಿ ಮತದಾರರ ಚೀಟಿ ಹೊಂದಿರುವವರೂ ಇದ್ದಾರೆ. ಅಂಥವರನ್ನು ತೆಗೆಯುವ ಕೆಲಸ ಆಯೋಗ ಮಾಡಬೇಕು. ದೂರುಗಳು ಬಂದಲ್ಲಿ ಅಧಿಕಾರಿಗಳಿಂದ ತನಿಖೆ ಮಾಡಿಸಬೇಕು. ಅಧಿಕೃತ ಜನರಿಗೆ ಮಾತ್ರ ಮತದಾನದ ಹಕ್ಕು ಇರಬೇಕು ಅದನ್ನು ಮೇಲ್ವಿಚಾರಣೆ ಮಾಡುವ ಕೆಲಸವನ್ನು ಚುನಾವಣಾ ಆಯೋಗವೇ ಮಾಡಬೇಕು ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...