ಬೆಂಗಳೂರು: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬಳಿಕ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಯುವತಿಯನ್ನು ಪ್ರೀತಿಸಿ ಬಳಿಕ ಮದುವೆಯಾಗಬೇಕಾದರೆ ಮತಾಂತರವಾಗಲೇಬೇಕು ಎಂದು ಬಲವಂತದ ಮತಾಂತರಕ್ಕೆ ಯತ್ನಿಸಿದ್ದ ಹಿನ್ನೆಲೆಯಲ್ಲಿ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸೈಯದ್ ಮೊಯಿನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪ್ರಕರಣ ಸಂಬಂಧ ಆರೋಪಿ ಸೈಯದ್ ಮೊಯಿನ್ (24) ನನ್ನು ಮತಾಂತರ ನಿಷೇಧ ಕಾಯ್ದೆಯಡಿ ಬಂಧಿಸಲಾಗಿದೆ. ಆರಂಭದಲ್ಲಿ ಇದೊಂದು ಮಿಸ್ಸಿಂಗ್ ಕೇಸ್ ಎಂದು ಪರಿಗಣಿಸಲಾಗಿತ್ತು. ತನಿಖೆ ಬಳಿಕ ಇದು ಮತಾಂತರ ಪ್ರಕರಣ ಎಂದು ತಿಳಿದುಬಂದಿದೆ.