alex Certify BIG NEWS: ಮತಾಂಧ ಶಕ್ತಿ ತಲೆ ಎತ್ತಲು ಬಿಡಬಾರದು; ಗೃಹ ಸಚಿವ ಅರಗ ಜ್ಞಾನೇಂದ್ರ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತಾಂಧ ಶಕ್ತಿ ತಲೆ ಎತ್ತಲು ಬಿಡಬಾರದು; ಗೃಹ ಸಚಿವ ಅರಗ ಜ್ಞಾನೇಂದ್ರ ಆಕ್ರೋಶ

ಬೆಂಗಳೂರು; ಉದಯಪುರದಲ್ಲಿ ಟೈಲರ್ ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಇಂತಹ ಪೈಶಾಚಿಕ ಕೃತ್ಯವೆಸಗುವವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಕಾಂಗ್ರೆಸ್ ಸರ್ಕಾರ ಮತಾಂಧ ಶಕ್ತಿಗಳನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ. ಆ ವ್ಯಕ್ತಿಗಳು ರಾಜ್ಯದಲ್ಲಿ ಬೆಳೆಯಲು ಬಿಟ್ಟಿದೆ. ಟೈಲರ್ ಹತ್ಯೆ ಬಗ್ಗೆ ರಾಜಸ್ಥಾನ ಸರ್ಕಾರ ಉತ್ತರ ಕೊಡಬೇಕು ಎಂದರು.

ಮತಾಂಧ ಶಕ್ತಿಗಳು ತಲೆ ಎತ್ತಲು ಬಿಡಬಾರದು. ಅಂತವರ ಅಟ್ಟಹಾಸವನ್ನು ಸರ್ಕಾರಗಳು ಮಟ್ಟಹಾಕಬೇಕಿದೆ. ಮತಾಂಧ ಶಕ್ತಿಗಳು ಧರ್ಮ ಎಂದರೆ ರಕ್ತಪಾತ, ಹತ್ಯೆ ಎಂದುಕೊಂಡುಬಿಟ್ಟಿದ್ದಾರೆ. ಇಂತಹ ತಿಳುವಳಿಕೆ ಇಡೀ ಜಗತ್ತಿಗೆ ಅಪಾಯಕಾರಿಯಾಗಿದೆ. ಇಂತಹ ಶಕ್ತಿಗಳನ್ನು ನಿಯಂತ್ರಿಸಬೇಕಿದೆ. ಆರೋಪಿಗಳ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮಗಳನ್ನು ಜಾರಿಗೆ ತರುವ ಕೆಲಸ ಮಾಡಬೇಕು. ಆಗ ಮಾತ್ರ ಶಾಂತಿ, ನೆಮ್ಮದಿ ಇರಲು ಸಾಧ್ಯ ಎಂದು ಹೇಳಿದರು

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...