alex Certify BIG NEWS: ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಲಿರುವ ಸಿಎಂ; 4 ಸಚಿವ ಸ್ಥಾನಕ್ಕಾಗಿ ಶಾಸಕರಿಂದ ಲಾಬಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಲಿರುವ ಸಿಎಂ; 4 ಸಚಿವ ಸ್ಥಾನಕ್ಕಾಗಿ ಶಾಸಕರಿಂದ ಲಾಬಿ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಮತ್ತೆ ದೆಹಲಿಯತ್ತ ಪ್ರಯಾಣ ಬೆಳೆಸುತ್ತಿದ್ದು, ನಾಳೆ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಸಿಎಂ ಬೊಮ್ಮಾಯಿ ವೈಯಕ್ತಿಕ ಕಾರ್ಯದ ನಿಮಿತ್ತ ನಾಳೆ ಬೆಳಿಗ್ಗೆ ದೆಹಲಿಗೆ ತೆರಳುತ್ತಿದ್ದು, ಸಂಜೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಈ ವೇಳೆ ಖಾಲಿ ಇರುವ ನಾಲ್ಕು ಸಚಿವ ಸ್ಥಾನ ಭರ್ತಿ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ದಂಗಾಗಿಸುತ್ತೆ ಸುರಂಗದೊಳಗೆ ಚಲಿಸಿದ ವಿಮಾನದ ವಿಡಿಯೋ

ಸಿಎಂ ನಾಳೆ ದೆಹಲಿಗೆ ಭೇಟಿ ನೀಡುತ್ತಿರುವ ಹಿನ್ನೆಯಲ್ಲಿ ಇತ್ತ ಸಚಿವಾಕಾಂಕ್ಷಿಗಳಿಂದ ಲಾಬಿ ಆರಂಭವಾಗಿದೆ. ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಸೇರಿದಂತೆ ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ಪೈಪೋಟಿ ನಡೆಸಿದ್ದು, ಇಂದು ಸಿಎಂ ಬೊಮ್ಮಾಯಿ ಅವರನ್ನು ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಒಟ್ಟಾರೆ ಉಳಿದ ನಾಲ್ಕು ಸಚಿವ ಸ್ಥಾನ ಭರ್ತಿ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆದಿರುವ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನಾಳಿನ ದೆಹಲಿ ಪ್ರಯಾಣ ತೀವ್ರ ಕುತೂಹಲ ಮೂಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...