alex Certify BIG NEWS: ಮರಳು ದಂಧೆಯಲ್ಲಿ ಕಮಿಷನ್ ಆರೋಪ; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಿದ ಶಾಸಕ ಹರತಾಳು ಹಾಲಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮರಳು ದಂಧೆಯಲ್ಲಿ ಕಮಿಷನ್ ಆರೋಪ; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಿದ ಶಾಸಕ ಹರತಾಳು ಹಾಲಪ್ಪ

ಧರ್ಮಸ್ಥಳ: ರಾಜ್ಯ ರಾಜಕೀಯದಲ್ಲಿ ಮತ್ತೆ ಆಣೆ-ಪ್ರಮಾಣಗಳು ಆರಂಭವಾಗಿವೆ. ಶಾಸಕ ಹರತಾಳು ಹಾಲಪ್ಪ ವಿರುದ್ಧ ಮರಳು ಲಾರಿಗಳಿಂದ ಕಮಿಷನ್ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡುವಂತೆ ಹಾಕಿದ್ದ ಸವಾಲು ಸ್ವೀಕರಿಸಿರುವ ಹರತಾಳು ಹಾಲಪ್ಪ ಇದೀಗ ಧರ್ಮಸ್ಥಳದಲ್ಲಿ ಪ್ರಮಾಣ ಮಾಡಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಶಾಸಕ ಹಾಲಪ್ಪ, ದೇವರ ಮುಂದೆ ಪ್ರಮಾಣ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಶಾಸಕ ಹರತಾಳು ಹಾಲಪ್ಪ, ಮರಳು ದಂಧೆಯಲ್ಲಿ ಯಾವುದೇ ಕಮಿಷನ್ ನಾನು ಪಡೆದಿಲ್ಲ ಎಂದು ಪ್ರಮಾಣ ಮಾಡಿದ್ದೇನೆ. ವಿನಾಕಾರಣ ನನ್ನ ವಿರುದ್ಧ ಆರೋಪ ಮಾಡುತ್ತಿರುವ ಬೇಳೂರು ಗೋಪಾಲಕೃಷ್ಣ ಅವರಿಗೆ ದೇವರು ಸದ್ಬುದ್ಧಿ ಕರುಣಿಸಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.

ವಾಹನ ಸವಾರರಿಗೆ ಮುಖ್ಯ ಮಾಹಿತಿ: ಚಾಲನೆ ವೇಳೆ ಫೋನ್ ನಲ್ಲಿ ಮಾತಾಡಬಹುದು; ಸಾರಿಗೆ ಇಲಾಖೆಯಿಂದ ಹೊಸ ನಿಯಮ ಜಾರಿ ಬಗ್ಗೆ ನಿತಿನ್ ಗಡ್ಕರಿ ಮಾಹಿತಿ

ಬೇಳೂರು ಗೋಪಾಲ ಕೃಷ್ಣಗೆ ಬುದ್ಧಿ ಭ್ರಮಣೆಯಾಗಿದೆ. ನನಗೆ ಸವಾಲು ಹಾಕಿ ಇವರು ಪಲಾಯನವಾದ ಮಾಡಿದ್ದಾರೆ. ಧರ್ಮಸ್ಥಳಕ್ಕೆ ಬರದೇ ಗೋವಾ ಚುನಾವಣೆಗೆ ಹೋಗುತ್ತೇನೆ ಎಂದಿದ್ದಾರೆ. ಇವರಿಗೆ ಗೋವಾ ಚುನಾವಣೆಗೆ ಕರೆದವರು ಯಾರು. ಸುಳ್ಳು ಹೇಳಿ ತಪ್ಪಿಸಿಕೊಳ್ಳಲು ಹೊರಟಿದ್ದಾರೆ. ದೇವರೆದುರು ನಾನು ಆಣೆ-ಪ್ರಮಾಣ ಮಾಡಿದ್ದೇನೆ. ನಾನು ಯಾವುದೇ ಕಮಿಷನ್ ಹಣ ಪಡೆದಿಲ್ಲ. ಪ್ರತಿ ಬಾರಿ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ದೇವರೇ ನೋಡಿಕೊಳ್ಳುತ್ತಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...