alex Certify BIG NEWS: ಮಳೆಹಾನಿ ಬಗ್ಗೆ ಸಂಜೆ ವೇಳೆ ಸ್ಪಷ್ಟ ಮಾಹಿತಿ; ಕೊಡಗಿನಲ್ಲಿ ಗುಡ್ಡ ಕುಸಿತ; ಮನೆ ಹಾನಿ ಖುದ್ದು ಪರಿಶೀಲಿಸಿದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಳೆಹಾನಿ ಬಗ್ಗೆ ಸಂಜೆ ವೇಳೆ ಸ್ಪಷ್ಟ ಮಾಹಿತಿ; ಕೊಡಗಿನಲ್ಲಿ ಗುಡ್ಡ ಕುಸಿತ; ಮನೆ ಹಾನಿ ಖುದ್ದು ಪರಿಶೀಲಿಸಿದ ಸಿಎಂ

ಮಡಿಕೇರಿ: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆಹಾನಿ ಪ್ರದೇಶಗಳ ಪರಿಶೀಲನೆಗಾಗಿ ಖುದ್ದು ಭೇಟಿ ನೀಡಿದ್ದಾರೆ.

ಇಂದಿನಿಂದ ಎರಡು ದಿನಗಳ ಕಾಲ ಸಿಎಂ ಬಸವರಾಜ್ ಬೊಮ್ಮಾಯಿ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿಗೆ ಭೇಟಿ ನೀಡಿರುವ ಸಿಎಂ ಬೊಮ್ಮಾಯಿ, ಮಳೆಯಿಂದ ಕುಸಿದ ಮನೆಗಳು, ಗುಡ್ಡ ಕುಸಿತದಿಂದಾದ ಅನಾಹುತಗಳ ಬಗ್ಗೆ ಪರಿಶೀಲನೆ ನಡೆಸಿದರು. ಸಂತ್ರಸ್ತರ ಸಮಸ್ಯೆ ಆಲಿಸಿದ ಸಿಎಂ, ಪರಿಹಾರ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, ಇಂದು ಸಂಜೆ ವೇಳೆಗೆ ಮಳೆಹಾನಿ ಕುರಿತು ಸ್ಪಷ್ಟ ಮಾಹಿತಿ ಸಿಗಲಿದೆ. ವರದಿ ಸಿದ್ಧವಾಗುತ್ತಿದೆ ಎಂದರು. ಕರಾವಳಿ ಭಾಗದಲ್ಲಿ ಹಲವೆಡೆ ಕಡಲ ಕೊರೆತದಿಂದ ಹಾಗೂ ಭಾರಿ ಮಳೆಯಿಂದಾಗಿ ತೀವ್ರ ಸಮಸ್ಯೆಯುಂಟಾಗಿದೆ. ನದಿ ಪಕ್ಕದ ಮನೆಗಳ ಸ್ಥಳಾಂತರಕ್ಕೆ ಚಿಂತನೆ ನಡೆಸಲಾಗಿದೆ. ಮಳೆಹಾನಿ ಕುರಿತ ಮೊದಲ ಹಂತದ ನಷ್ಟದ ಅಂಕಿ-ಅಂಶಗಳ ಬಗ್ಗೆ ಸಂಜೆ ಮಾಹಿತಿ ಸಿಗಲಿದೆ. ರಕ್ಷಣಾ ಕಾರ್ಯಾಚರಣೆಗೆ ನಮ್ಮಲ್ಲಿ ಹಣದ ಕೊರತೆಯಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ತುರ್ತು ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...