alex Certify BIG NEWS: ಮಳೆ, ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ಪರಿಹಾರ; ಸಿಎಂ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಳೆ, ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ಪರಿಹಾರ; ಸಿಎಂ ಘೋಷಣೆ

ಬೆಂಗಳೂರು: ಭಾರಿ ಮಳೆ, ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.

ನೆರೆ ಸಂಕಷ್ಟ ವಿಚಾರವಾಗಿ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಬೊಮ್ಮಾಯಿ ಬಳಿಕ ಮಾತನಾಡಿ, ಮಳೆ ಕಡಿಮೆಯಾದರೂ ಹಲವು ಪ್ರದೇಶಗಳಲ್ಲಿ ಪ್ರವಾಹದಿಂದ ನೀರು ತುಂಬಿಕೊಂಡಿದ್ದು, ನೀರು ಹಾಗೆಯೇ ನಿಂತಿದ್ದು, ಅನೇಕ ಪ್ರದೇಶಗಳು ಜಲಾವೃತಗೊಂಡಿದೆ. ಇದರಿಂದಾಗಿ 466 ಗ್ರಾಮಗಳಲ್ಲಿ ಸಮಸ್ಯೆಯಾಗಿದೆ. ಭಾರಿ ಮಳೆ ಪ್ರವಾಹದಿಂದಾಗಿ ರಾಜ್ಯದಲ್ಲಿ ಈವರೆಗೆ 13 ಜನ ಸಾವನ್ನಪ್ಪಿದ್ದಾರೆ. ಇಬ್ಬರು ಕಣ್ಮರೆಯಾಗಿದ್ದಾರೆ ಎಂದರು.

ಸಾಲ ಸೌಲಭ್ಯ, ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಮಳೆಯಿಂದ ಶೇ.75ರಷ್ಟು ಭಾಗ ಮನೆಕಳೆದುಕೊಂಡವರಿಗೆ 5 ಲಕ್ಷ ಹಾಗೂ ಅರ್ಧ ಮನೆ ಕಳೆದುಕೊಂಡವರಿಗೆ 3 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಬೆಳೆ ಹಾನಿ ಸಮೀಕ್ಷೆ ನಡೆಸಿ 15 ದಿನಗಳಲ್ಲಿ ವರದಿ ನೀಡಬೇಕು ಹಾಗೂ ಮನೆ ಹಾನಿಯಾದವರಿಗೆ ತಕ್ಷಣ 10,000 ಪರಿಹಾರ ವಿತರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...