alex Certify BIG NEWS: ಮಹಾರಾಷ್ಟ್ರದವರು ಏನು ಬೇಕಾದ್ರೂ ಮಾತಾಡಲಿ; ಸಂಯಮದಿಂದ ಇರೋಣ ಎಂದ ಗೃಹ ಸಚಿವರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಾರಾಷ್ಟ್ರದವರು ಏನು ಬೇಕಾದ್ರೂ ಮಾತಾಡಲಿ; ಸಂಯಮದಿಂದ ಇರೋಣ ಎಂದ ಗೃಹ ಸಚಿವರು

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರವಾಗಿ ನಾವು ಸಂಯಮದಿಂದ ಇರೋಣ ಎಂದು ಗೃಹ ಸಚಿವ ಅರಗ ಜ್ಞಾನೆಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಮಹಾರಾಷ್ಟ್ರದವರು ಏನು ಬೇಕಾದರೂ ಮಾತನಾಡಲಿ ನಾವು ಸಂಯಮದಿಂದ ಇರೋಣ. ನೆಲ, ಜಲ, ಭಾಷೆ ಹಿತ ಕಾಯಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದರು.

ಈಗಾಗಲೇ ನಮ್ಮ ಸಿಎಂ ಬೊಮ್ಮಾಯಿ ಅವರು ಮಹಾರಾಷ್ಟ್ರ ಸರ್ಕಾರದ ಜೊತೆ ಮಾತನಾಡಿದ್ದಾರೆ. ಎರಡೂ ರಾಜ್ಯಗಳ ಸಿಎಸ್, ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ನಾವು ಮಾತಿನಲ್ಲಿ ತೋರಿಸಲ್ಲ, ನಮ್ಮ ನಡವಳಿಕೆಯಲ್ಲಿ ತೋರಿಸುತ್ತೇವೆ. ಎಲ್ಲಾ ಕಡೆಯೂ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುತ್ತಿದೆ. ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳಬಾರದು ಶಾಂತಿಯಿಂದ ಇರಬೇಕು ಎಂದು ಹೇಳಿದರು.

ಇನ್ನು ಮಹಾರಾಷ್ಟ್ರ ಸಚಿವರು ರಾಜ್ಯಕ್ಕೆ ಭೇಟಿ ವಿಚಾರವಾಗಿ ಮಾತನಾಡಿದ ಗೃಹ ಸಚಿವರು, ಯಾವ ಸಚಿವರು ಎಲ್ಲಿ ಬೇಕಾದರೂ ಹೋಗಬಹುದು. ಆದರೆ ಈಗಿರುವ ಪರಿಸ್ಥಿತಿಯಲ್ಲಿ ಮಹಾ ಸಚಿವರು ರಾಜ್ಯಕ್ಕೆ ಬರುವುದು ಸರಿಯಲ್ಲ. ಅವರು ಬೆಳಗಾವಿಗೆ ಬಂದು ಪ್ರಚೋದನೆ ಮಾಡುವ ಅವಶ್ಯಕತೆಯಿಲ್ಲ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...