alex Certify BIG NEWS: ಮಹಾರಾಷ್ಟ್ರ ಸರ್ಕಾರದಲ್ಲಿ ಬಿರುಕು; ಶಾಸಕರೇ ಸರ್ಕಾರ ತೊಲಗಲಿ ಎನ್ನುತ್ತಿದ್ದಾರೆ; ಸಿ.ಟಿ.ರವಿ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಾರಾಷ್ಟ್ರ ಸರ್ಕಾರದಲ್ಲಿ ಬಿರುಕು; ಶಾಸಕರೇ ಸರ್ಕಾರ ತೊಲಗಲಿ ಎನ್ನುತ್ತಿದ್ದಾರೆ; ಸಿ.ಟಿ.ರವಿ ಹೇಳಿಕೆ

ಗೊಂದಲ ನಿವಾರಣೆಗೆ ಸಿಎಂ ಸಮರ್ಥರು : ಸಿ.ಟಿ.ರವಿ – EESANJE / ಈ ಸಂಜೆ

ಬೆಂಗಳೂರು: ಮಹಾ ಅಘಾಡಿ ಸರ್ಕಾರದ ವಿರುದ್ಧ ಜನರು ಮಾತ್ರವಲ್ಲ, ಶಾಸಕರೇ ತಿರುಗಿ ಬಿದ್ದಿದ್ದಾರೆ. ಸರ್ಕಾರ ತೊಲಗಲಿ ಎಂದು ಹೇಳುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಮಹಾರಾಷ್ಟ್ರ ಸರ್ಕಾರದ ಬಗ್ಗೆ ಮೂರು ಪಕ್ಷದ ಶಾಸಕರು ಭ್ರಮನಿರಸರಾಗಿದ್ದಾರೆ. ಸರ್ಕಾರ ತೊಲಗಲಿ ಎಂದು ಶಾಸಕರೇ ಬೈಯ್ಯುತ್ತಿದ್ದಾರೆ. ಇದೊಂದು ಯಾವ ತಾಳಮೇಳವಿಲ್ಲದ ಅಪವಿತ್ರ ಮೈತ್ರಿ ಸರ್ಕಾರ. ಸೈದ್ಧಾಂತಿಕವಾಗಿಯೂ ಮಿಸ್ ಮ್ಯಾಚ್ ಸರ್ಕಾರ. ಹಾಗಾಗಿ ಸರ್ಕಾರ ಪತನವಾದರೆ ಅಚ್ಚರಿಯಿಲ್ಲ ಎಂದರು.

ಚುನಾವಣೆ ಸಂದರ್ಭದಲ್ಲೇ ಫಡ್ನವಿಸ್ ನೇತೃತ್ವದ ಬಿಜೆಪಿ ಸರ್ಕಾರ ಬರಬೇಕು ಎಂಬ ಅಪೇಕ್ಷೆ ಇತ್ತು. 2019ರಲ್ಲಿ ಜನ ಮತ ಹಾಕಿದ್ದು ಮೋದಿ, ಫಡ್ನವಿಸ್ ಸರ್ಕಾರಕ್ಕೆ. ಇದೊಂದು ತತ್ವಹೀನ, ಅಭಿವೃಧಿ ಯೋಜನೆಗಳಿಲ್ಲದ ಸರ್ಕಾರವಾಗಿದೆ ಎಂದು ಕಿಡಿಕಾರಿದರು.

ಮಹಾರಾಷ್ಟ್ರದ ಪ್ರಭಾರಿಯಾಗಿ ನಮ್ಮ ಪಕ್ಷದ ನಾಯಕರ ಜತೆ ಸಂಪರ್ಕದಲ್ಲಿದ್ದೇನೆ. ಜನ ಮತ ನೀಡಿದ್ದು, ಬೆಂಬಲ ವ್ಯಕ್ತಪಡಿಸಿದ್ದು ಮೋದಿ, ಫಡ್ನವಿಸ್ ನೇತೃತ್ವದ ಸರ್ಕಾರಕ್ಕೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...