alex Certify BIG NEWS: ಮಹಿಳಾ ಅಧಿಕಾರಿಗಳ ಸಂಘರ್ಷಕ್ಕೆ ಬ್ರೇಕ್; ಸುತ್ತೂರು ಶ್ರೀಗಳ ಸಂಧಾನ ಸಫಲ; ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ರಾಜೀನಾಮೆ ವಾಪಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಿಳಾ ಅಧಿಕಾರಿಗಳ ಸಂಘರ್ಷಕ್ಕೆ ಬ್ರೇಕ್; ಸುತ್ತೂರು ಶ್ರೀಗಳ ಸಂಧಾನ ಸಫಲ; ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ರಾಜೀನಾಮೆ ವಾಪಸ್

ಮೈಸೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಸಂಘರ್ಷಕ್ಕೆ ಬ್ರೇಕ್ ಹಾಕಲಾಗಿದ್ದು, ಸುತ್ತೂರು ಶ್ರೀಗಳ ಸಮ್ಮುಖದಲ್ಲಿ ನಡೆದ ಸಂಧಾನ ಸಫಲವಾದಂತಾಗಿದೆ.

ಕೊರೊನಾದಂತಹ ಆರೋಗ್ಯ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜನರು ಸಂಕಷ್ಟ ಎದುರಿಸುತ್ತಿರುವಾಗ ಜಟಾಪಟಿ ಬೇಡ. ರಾಜೀನಾಮೆ ನಿರ್ಧಾರವನ್ನು ವಾಪಸ್ ಪಡೆಯುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸುತ್ತೂರು ಶ್ರೀಗಳ ಸಮ್ಮುಖದಲ್ಲಿ ಸಂಧಾನ ಮಾತುಕತೆ ನಡೆಸಿದ್ದರು. ಏನೇ ಸಮಸ್ಯೆಗಳಿದ್ದರೂ ಈ ಸಂದರ್ಭದಲ್ಲಿ ಅದನ್ನು ಮುಂದುವರೆಸುವುದು ಬೇಡ ಎಂದು ಮನವೊಲಿಕೆ ಮಾಡಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಆಯುಕ್ತೆ ಶಿಲ್ಪಾ ನಾಗ್ ಕೂಡ ಒಪ್ಪಿದ್ದಾರೆ ಎನ್ನಲಾಗಿದೆ.

ಇನ್ನು ಶಿಲ್ಪಾನಾಗ್ ನೀಡಿರುವ ರಾಜೀನಾಮೆಯನ್ನು ಮುಖ್ಯಕಾರ್ಯದರ್ಶಿ ರವಿಕುಮಾರ್ ಕೂಡ ಸ್ವೀಕರಿಸಿಲ್ಲ. ಮತ್ತೊಮ್ಮೆ ಯೋಚಿಸಿ ನಿರ್ಧರಿಸುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಧ್ಯ ಶಿಲ್ಪಾ ನಾಗ್ ಇಂದು ಮತ್ತು ನಾಳೆ ಅಧಿಕೃತ ರಜೆಯಲ್ಲಿದ್ದು, ಸೋಮವಾರ ರಾಜೀನಾಮೆ ಹಿಂಪಡೆಯುವ ಬಗ್ಗೆ ನಿರ್ಧರಿಸಲಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...