alex Certify BIG NEWS: ಮಹಿಳೆಯರ ರಕ್ಷಣೆಗೆ ಆದ್ಯತೆ; ಸಿಲಿಕಾನ್ ಸಿಟಿಯಲ್ಲಿ ಮತ್ತೆ ಟೋಯಿಂಗ್ ಆರಂಭ ಎಂದ ನೂತನ ಕಮೀಷನರ್ ಪ್ರತಾಪ್ ರೆಡ್ಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಿಳೆಯರ ರಕ್ಷಣೆಗೆ ಆದ್ಯತೆ; ಸಿಲಿಕಾನ್ ಸಿಟಿಯಲ್ಲಿ ಮತ್ತೆ ಟೋಯಿಂಗ್ ಆರಂಭ ಎಂದ ನೂತನ ಕಮೀಷನರ್ ಪ್ರತಾಪ್ ರೆಡ್ಡಿ

ಬೆಂಗಳೂರು: ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿರುವ ಸಿ.ಹೆಚ್. ಪ್ರತಾಪ್ ರೆಡ್ಡಿ, ಮಹಿಳೆಯರ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಮೀಷನರ್ ಪ್ರತಾಪ್ ರೆಡ್ಡಿ, ಬೆಂಗಳೂರಿನಲ್ಲಿ ಶೀಘ್ರದಲ್ಲಿಯೇ ವಾಹನ ಟೋಯಿಂಗ್ ಆರಂಭವಾಗಲಿದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಜತೆ ಮಾತನಾಡಿ ಟೋಯಿಂಗ್ ಜಾರಿಗೊಳಿಸುತ್ತೇವೆ ಎಂದರು.

ಪ್ರತಿ ಸ್ಟೇಷನ್ ನಲ್ಲಿಯೂ ಕನಿಷ್ಠ ನಾಲ್ಕು ಸಿಸಿ ಟಿವಿ ಅಳವಡಿಸಲಾಗುವುದು. ಯಾರೇ ದೂರು ನೀಡಿದರೂ ದಾಖಲೆಯಾಗಬೇಕು. ಈ ನಿಟ್ಟಿನಲ್ಲಿ ಈಗಾಗಲೇ ಸೂಚನೆ ನೀಡಿದ್ದೇನೆ ಎಂದರು.

ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ ಕುಟುಂಬಕ್ಕೆ 25.27 ಲಕ್ಷ ರೂ. ಪರಿಹಾರಕ್ಕೆ ಆದೇಶ

ಕೋವಿಡ್ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ನಗರದಲ್ಲಿ ವಾಹನ ದಟ್ಟಣೆ ಕಡಿಮೆಯಾಗಿತ್ತು. ಕಾರಣ ವರ್ಕ್ ಫ್ರಂ ಹೋಂ ಸಂಖ್ಯೆ ಹೆಚ್ಚಿತ್ತು. ಆದರೆ ಈಗ ವರ್ಕ್ ಫ್ರಂ ಹೋಂ ಅಂತ್ಯವಾಗಿದ್ದರಿಂದ ವಾಹನಗಳ ಸಂಚಾರ ಸಹಜವಾಗಿ ಹೆಚ್ಚಳವಾಗಿದೆ. ಈ ನಿಟ್ಟಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಹೆಚ್ಚಿನ ಗಮನ ಹರಿಸಲಾಗುತ್ತದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...