alex Certify BIG NEWS: ಮಾಂಡೌಸ್ ಚಂಡಮಾರುತದ ಅಬ್ಬರಕ್ಕೆ ತತ್ತರಿಸಿದ ತಮಿಳುನಾಡು; 6 ಜನ ಬಲಿ; 3163 ಕ್ಕೂ ಹೆಚ್ಚು ಜನರ ಸ್ಥಳಾಂತರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಂಡೌಸ್ ಚಂಡಮಾರುತದ ಅಬ್ಬರಕ್ಕೆ ತತ್ತರಿಸಿದ ತಮಿಳುನಾಡು; 6 ಜನ ಬಲಿ; 3163 ಕ್ಕೂ ಹೆಚ್ಚು ಜನರ ಸ್ಥಳಾಂತರ

ಚೆನ್ನೈ: ತಮಿಳುನಾಡಿನಾದ್ಯಂತ ಮಾಂಡೌಸ್ ಚಂಡಮಾರುತದ ರೌದ್ರಾವತಾರಕ್ಕೆ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಮಾಂಡೌಸ್ ಅಬ್ಬರಕ್ಕೆ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿರುಗಾಳಿ, ಮಳೆಯಿಂದಾಗಿ ಚೆನ್ನೈ, ಚಂಗಲಪಟ್ಟು ಜಿಲ್ಲೆಗಳು ಜಲಾವೃತಗೊಂಡಿದ್ದು, ಜನರು ಪರದಾಡುವಂತಾಗಿದೆ.

ಈಗಾಗಲೇ ತಮಿಳುನಾಡಿನಲ್ಲಿ ಚಂಡಮಾರುತದ ಅನಾಹುತಕ್ಕೆ 6 ಜನರು ಸಾವನ್ನಪ್ಪಿದ್ದು, ನೂರಾರು ಜಾನುವಾರಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಸಂಕಷ್ಟದಲ್ಲಿ ಸಿಲುಕಿದ್ದ 3163 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಚೆನ್ನೈ ನಗರದಲ್ಲಿಯೇ 500 ಮರಗಳು ಧರಾಶಾಹಿಯಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...