alex Certify BIG NEWS: ಮಾಜಿ ಕಾರ್ಪೊರೇಟರ್ ಹತ್ಯೆ ಪ್ರಕರಣ; ಓರ್ವ ಪ್ರಮುಖ ಆರೋಪಿ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಕಾರ್ಪೊರೇಟರ್ ಹತ್ಯೆ ಪ್ರಕರಣ; ಓರ್ವ ಪ್ರಮುಖ ಆರೋಪಿ ವಶಕ್ಕೆ

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣ ಸಂಬಂಧ ಮೂವರು ಪ್ರಮುಖ ಆರೋಪಿಗಳಲ್ಲಿ ಇದೀಗ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಹೊಸೂರು ರಸ್ತೆಯ ಹುಸ್ಕೂರು ಬಳಿ ಓರ್ವ ಪ್ರಮುಖ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನಿಬ್ಬರು ಆರೋಪಿಗಳು ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ. ಕೊಲೆ ಮಾಡಿದ ಪ್ರಮುಖ ಆರೋಪಿಗಳಾದ ಪೀಟರ್ ಹಾಗೂ ಸ್ಟೀಫನ್ ಗಾಗಿ ತೀವ್ರ ಹುಡುಕಾಟ ನಡೆಸಲಾಗಿದೆ.

ಲೀಲಾಜಾಲವಾಗಿ ʼಯೋಗʼ ಮಾಡಿದ ಪುಟ್ಟ ಬಾಲಕ

ರೇಖಾ ಕದಿರೇಶ್ ಹತ್ಯೆ ಬಳಿಕ ಮೂವರು ಆರೋಪಿಗಳು ಆಟೋದಲ್ಲಿ ಪರಾರಿಯಾಗಿದ್ದು, ಹೊಸೂರು ರಸ್ತೆಯ ಬಳಿ ತೆರಳುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ ಆದರೆ ಇನ್ನಿಬ್ಬರು ಪರಾರಿಯಾಗಿದ್ದಾರೆ. ಕರ್ನಾಟಕ ಹಾಗೂ ತಮಿಳುನಾಡಿನ ಗಡಿ ಭಾಗದಲ್ಲಿ ಇದೀಗ ಆರೋಪಿಗಳಿಗಾಗಿ ಶೋಧ ಮುಂದುವರೆದಿದೆ.

ಬೆಚ್ಚಿಬೀಳಿಸುವಂತಿದೆ ತಾಯಿಯೇ 5 ವರ್ಷದ ಮಗಳನ್ನು 15 ಬಾರಿ ಇರಿದು ಕೊಂದಿರುವ ಹಿಂದಿನ ಕಾರಣ

ರೇಖಾ ಕದಿರೇಶ್ ಹತ್ಯೆ ಪ್ರಕರಣ ಸಂಬಂಧ ಈಗಾಗಲೇ 50ಕ್ಕೂ ಹೆಚ್ಚು ಜನರನ್ನು ವಿಚಾರಣೆ ನಡೆಸಿರುವ ಪೊಲೀಸರು, ಕದಿರೇಶ್ ಸಹೋದರಿ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...