alex Certify BIG NEWS: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಾರಕಿಹೊಳಿ ವಿರುದ್ಧ ವಜಾಗೊಂಡಿದ್ದ ಪ್ರಕರಣವೊಂದಕ್ಕೆ ಮರುಜೀವ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ರಮೇಶ್ ಜಾರಕಿಹೊಳಿ ವಿರುದ್ಧ ಸಹಕಾರಿ ಬ್ಯಾಂಕ್ ಗೆ ನೀಡಿದ್ದ 5.2ಕೋಟಿ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಸಹಕಾರಿ ಬ್ಯಾಂಕ್ ಖಾಸಗಿ ದೂರು ದಾಖಲಿಸಿತ್ತು. ಆದರೆ ಬ್ಯಾಂಕ್ ಪರ ವಕೀಲರು ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ಚಿಕ್ಕೋಡಿ ನ್ಯಾಯಾಲಯ ಪ್ರಕರಣ ವಜಾಗೊಳಿಸಿ ಆದೇಶ ನೀಡಿತ್ತು. ಈ ಆದೇಶ ರದ್ದುಗೊಳಿಸಿರುವ ಹೈಕೋರ್ಟ್ ಚಿಕ್ಕೋಡಿ ನ್ಯಾಯಾಲಯದ ಆದೇಶ ಕಾನೂನು ರೀತಿಯಲ್ಲ ಎಂದು ತಿಳಿಸಿದೆ.

ಖಾಸಗಿ ದೂರು ದಾಖಲಿಸಿದ ದಿನಾಂಕದಿಂದ ಮರು ವಿಚಾರಣೆ ನಡೆಸಿ, ಸೂಕ್ತ ಆದೇಶ ನೀಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ ಎದುರಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...