alex Certify BIG NEWS: ಮಾತನಾಡುವಾಗ ನಾಲಿಗೆ ಬಿಗಿಹಿಡಿದು ಮಾತನಾಡಬೇಕು; ಶಾಸಕ ಜಮೀರ್ ಅಹ್ಮದ್ ಗೆ ಮುತಾಲಿಕ್ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾತನಾಡುವಾಗ ನಾಲಿಗೆ ಬಿಗಿಹಿಡಿದು ಮಾತನಾಡಬೇಕು; ಶಾಸಕ ಜಮೀರ್ ಅಹ್ಮದ್ ಗೆ ಮುತಾಲಿಕ್ ಎಚ್ಚರಿಕೆ

ಬಾಗಲಕೋಟೆ: ಹಿಜಾಬ್ ವಿಚಾರವಾಗಿ ಶಾಸಕ ಜಮೀರ್ ಅಹ್ಮದ್ ನೀಡಿರುವ ಹೇಳಿಕೆ ಮಹಿಳೆಯರಿಗೆ ಮಾಡಿದ ಅಪಮಾನ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಮೋದ್ ಮುತಾಲಿಕ್, ಹಿಜಾಬ್ ಧರಿಸದೇ ಇದ್ದರೆ ರೇಪ್ ಆಗುತ್ತೆ ಎಂಬ ಜಮೀರ್ ಹೇಳಿಕೆ ಅತ್ಯಂತ ನಿರ್ಲಜ್ಜದ ಹೇಳಿಕೆ. ಈ ದೇಶದಲ್ಲಿ ಹಿಂದೂ ಮಹಿಳೆಯರು ಹಿಜಾಬ್ ಇಲ್ಲದೇ ಜೀವನ ಮಾಡುತ್ತಿದ್ದಾರೆ. ಅವರು ಸುರಕ್ಷಿತರಾಗಿಯೇ ಇದ್ದಾರೆ. ಹೀಗಿರುವಾಗ ಹಿಜಾಬ್ ಇಲ್ಲದಿದ್ದರೆ ಅತ್ಯಾಚಾರವಾಗುತ್ತದೆ ಎಂಬ ರೀತಿಯಲ್ಲಿ ಶಾಸಕರು ನೀಡಿದ ಹೇಳಿಕೆ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾತನಾಡುವಾಗ ನಾಲಿಗೆ ಬಿಗಿ‌ ಹಿಡಿದು ಮಾತನಾಡಬೇಕು. ಇಂತಹ ಹೇಳಿಕೆಗಳನ್ನು ನೀಡಿ ಶಾಸಕರು ಗೊಂದಲ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...